- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಯಡಿಯೂರಪ್ಪ ವಾಗ್ದಾಳಿ

yedeyorappa [1]ಶಿವಮೊಗ್ಗ: ಹಿಂದಿನ ಬಿಜೆಪಿ ಸರ್ಕಾರ ಹಾಗೂ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮಾಡಿರುವ ಟ್ವೀಟ್‌ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಒಬ್ಬ ತಲೆ ತಿರುಕ. ಮಾತನಾಡುವ ಮುನ್ನಾ ತಾನೇನು ಎಂದು ತಿಳಿದುಕೊಳ್ಳಬೇಕು. ಇನ್ನೊಬ್ಬರ ಬಗ್ಗೆ ಮಾತನಾಡುವಾಗ, ಟೀಕೆ-ಟಿಪ್ಪಣಿ ಮಾಡುವಾಗ ತನ್ನ ಸುತ್ತ ಯಾರು ಇದ್ದಾರೆರೆ ಎಂದು ನೋಡಿಕೊಳ್ಳಬೇಕು ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯವನ್ನು ಹಾಳು ಮಾಡಿದಂತಹ ಭ್ರಷ್ಟ ಸಿಎಂರನ್ನು ಇಟ್ಟುಕೊಂಡು ಬೇರೆಯವರ ಮೇಲೆ ಬೊಟ್ಟು ಮಾಡುತ್ತಾರೆ. ಇಂತಹವರಿಗೆ ರಾಜ್ಯದ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದರು. ಇನ್ನು ವರುಣಾದಲ್ಲಿ ನನಗೆ ಯಾವುದೇ ಹಿನ್ನಡೆ ಆಗಿಲ್ಲ. ವಿಶೇಷ ಕಾರಣಕ್ಕೆ ವಿಜಯೇಂದ್ರನಿಗೆ ಟಿಕೆಟ್ ಕೈತಪ್ಪಿದೆ. ವಿಜಯೇಂದ್ರ ಬಹಳ ಸಂತೋಷದಿಂದ ಮೈಸೂರು ಹಾಗೂ ಚಾಮರಾಜನಗರದಲ್ಲಿ ಪ್ರವಾಸ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.