- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೈರಂಪಳ್ಳಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು ಮನೆ ಮನೆಗೆ ತೆರಳಿ ಮತಪ್ರಚಾರ

vinay-kumar [1]ಕಾಪು: ಕಾಪು ಕ್ಷೇತ್ರ ವ್ಯಾಪ್ತಿಯ ಹಿರಿಯಡ್ಕ ಬ್ಲಾಕ್ ನ ಬೈರಂಪಳ್ಳಿ ವ್ಯಾಪ್ತಿಯಲ್ಲಿ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು ಮನೆ ಮನೆಗೆ ತೆರಳಿ ಮತಪ್ರಚಾರ ನಡೆಸಿದರು.

ಈ‌ ಸಂದರ್ಭ ಮಾತನಾಡಿದ ಶಾಸಕ ಸೊರಕೆ, ಕಳೆದ ಬಾರಿಯ ಶಾಸಕರು 10 ವರ್ಷಗಳಲ್ಲಿ ಅಭಿವೃದ್ಧಿ ಮಾಡಲಾಗದಿದ್ದನ್ನು ನನ್ನ ಅವಧಿಯಲ್ಲಿನ 5 ವರ್ಷಗಳಲ್ಲಿ ಮಾಡಿತೋರಿಸಲಾಗಿದೆ ಎಂದು ಹೇಳಿದರು.

ಬೈರಂಪಳ್ಳಿ ವ್ಯಾಪ್ತಿಯ 6 ಬೂತ್ ಗಳಲ್ಲಿ ಮನೆ ಮನೆಗೆ ತೆರಳಿ ಮತ ಪ್ರಚಾರ ನಡೆಸಲಾಯಿತು.

ಹಿರಿಯಡ್ಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಹೆಗ್ಡೆ,ಕಾಂಗ್ರೆಸ್ ಮುಖಂಡರಾದ ಮಹಾಬಲ ಕುಂದರ್,ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಪ್ರಫುಲ್ಲ ಎಸ್ ಕುಲಾಲ್, ರಾಜು ಶೆಟ್ಟಿ ಮೊದಲಾದವರು ಶಾಸಕರಿಗೆ ಸಾಥ್ ನೀಡಿದರು.