ಶ್ರೀಕರ ಪ್ರಭು ಅವರಿಗೆ ಗೆಲ್ಲುವ ಸಾಧ್ಯತೆಯನ್ನುಇಮ್ಮಡಿಗೊಳಿಸಿದ ಮತದಾರ

9:11 PM, Friday, May 4th, 2018
Share
1 Star2 Stars3 Stars4 Stars5 Stars
(No Ratings Yet)
Loading...

Srikara Prabhuಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭುರವರು ಇಂದು ನಗರದ ಲೇಡಿ ಹಿಲ್, ಉರ್ವಾ ಮಾರ್ಕೆಟ್, ಉರ್ವಾ ಸ್ಟೋರ್, ಕೊಟ್ಟಾರ ಪರಿಸರದಲ್ಲಿ ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ನಾಗರೀಕ ಬಂದುಗಳಲ್ಲಿ ಪಾದಯಾತ್ರೆಯ ಮೂಲಕ ತಮ್ಮ ಚುನಾವಣಾ ಚಿಹ್ನೆ ‘ಆಟೋ ರಿಕ್ಷಾ’ ಮಾದರಿ ಪ್ರದರ್ಶಿಸಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮತದಾರ ಬಾಂದವರಿಂದ ಶ್ರೀಕರ ಪ್ರಭು ಅವರ ಬಗ್ಗೆ ಬಾರಿ ಒಲವು ವ್ಯಕ್ತವಾಗಿದ್ದು, ಇದು ಅವರು ಮುಂಬರುವ ಚುನಾವಣೆಯನ್ನು ಗೆಲ್ಲುವ ಸಾಧ್ಯತೆಯನ್ನು ಇಮ್ಮಡಿಗೊಳಿಸಿದೆ.

ಈ ಸಂದರ್ಭದಲ್ಲಿ ಶ್ರೀಕರ ಪ್ರಭು ಅಭಿಮಾನಿ ಬಳಗದ ಅದ್ಯಕ್ಷರದ ಕೆ.ಪಿ. ಶೆಟ್ಟಿ ಬೇಡೆಮಾರ್, ಉಸ್ತುವಾರಿ ಸುರೇಶ ಶೆಟ್ಟಿ, ಸಂಯೋಜಕ ಅವಿನಾಶ್ ಶೆಟ್ಟಿ, ನಿತಿನ್ ಸುವರ್ಣ, ಆನಂದ ಶೆಟ್ಟಿ, ರಾಮ್ ಮೋಹನ್, ಮಹೇಶ್ ಭಟ್, ಜೈರಾಮ್ ಕಾಮತ್, ಯತೀಶ್ ಕುಮಾರ್, ಶರತ್ ಅಮೀನ್, ಸೀಮಾ ಪ್ರಭು, ಐಶ್ವರ್ಯ ನಾಯಕ್ ಮತ್ತಿತರು ಉಪಸ್ಥಿತರಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English