ಕುಂದಾಪುರದ ಅಭ್ಯರ್ಥಿಗೆ ಸುರತ್ಕಲ್ ಅಭಿವೃದ್ಧಿಯ ಮಾಹಿತಿಯಿಲ್ಲ: ದೇವಿ ಪ್ರಸಾದ್ ಶೆಟ್ಟಿ

11:47 AM, Saturday, May 5th, 2018
Share
1 Star2 Stars3 Stars4 Stars5 Stars
(No Ratings Yet)
Loading...

mohuiddin-bavaಮಂಗಳೂರು: ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಕುಂದಾಪುರದಿಂದ ವಲಸೆ ಬಂದವರು ಹೀಗಾಗಿ ಉತ್ತರ ಕ್ಷೇತ್ರದಲ್ಲಿ ಆದ ಅಭಿವೃದ್ಧಿಯ ಮಾಹಿತಿಲ್ಲದೆ ಟೀಕಿಸುತ್ತಿದ್ದಾರೆ.ಮಂಗಳೂರು ಉತ್ತರ ಕ್ಷೇತ್ರದಲ್ಲಿ ಶಾಸಕ ಮೊದಿನ್ ಬಾವಾ ಅವರ ಸಾಧನೆ ಇತರ ಕ್ಷೇತ್ರಗಳಿಗೂ ಮಾದರಿಯಾಗಿದೆ. ಆರೋಗ್ಯ ನಿಯಿಂದ ಹಿಡಿದು ರಸ್ತೆಯವರೆಗೆ ಜನ ಸಾಮಾನ್ಯನಿಗೆ ಬೇಕಾದ ಸವಲತ್ತು ಒದಗಿಸುವಲ್ಲಿ ಮೊದಲ ಐದು ವರ್ಷದಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಮುಖಂಡ, ಚುನಾವಣಾ ಉಸ್ತುವಾರಿ ದೇವಿ ಪ್ರಸಾದ್ ಶೆಟ್ಟಿ ಹೇಳಿದರು.

ಸುರತ್ಕಲ್ ಬ್ಲಾಕ್ ಸಮಿತಿಯ ಕಾರ್ಪೊರೇಟರ್‌ಗಳು, ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಬಡವರಿಗೆ ಉಚಿತ ಅಕ್ಕಿ ನೀಡಿದರು. ಗ್ಯಾಸ್ ಒದಗಿಸಿದರು. ನೆಮ್ಮದಿಯಿಂದ ಇರಲು ಸೂರು ಒದಗಿಸಿದರು. ಆದರೆ ಬಿಜೆಪಿ ಹೇಳುತ್ತಿದೆ ಕೇಂದ್ರದ ಅನುದಾನದಿಂದ ಕೊಡುತ್ತಿದ್ದಾರೆ .ಕಾಂಗ್ರೆಸ್ಸಿಗರದು ಬಿಟ್ಟಿ ಪ್ರಚಾರ ಎಂಬುದು. ಆದರೆ ಬಿಜೆಪಿ ಆಡಳಿತವಿರುವ ಗುಜರಾತ್, ರಾಜಸ್ಥಾನ ಮತ್ತಿತರೆಡೆ ಇಂತಹ ಯೋಜನೆ ಯಾಕೆ ಜಾರಿಯಾಗಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಇದೀಗ ಟೀಕಿಸಲು ಯಾವುದೇ ವಿಚಾರಗಳು ಸಿಗುತ್ತಿಲ್ಲ.ಧರ್ಮಾಧಾರಿತ , ಜಾತಿ ವಿಷಯಗಳ ಬಗ್ಗೆ ಕೇಂದ್ರೀಕರಿಸಿ ಮತದಾರರನ್ನು ಉದ್ರೇಕಿಸುವ ಕೆಲಸ ಮಾಡುತ್ತಿದೆ. ಶಾಸಕ ಮೊದಿನ್ ಬಾವಾ ಅವರು ಯಾವುದೇ ಪಕ್ಷ ಬೇಧವಿಲ್ಲದೆ ಅನುದಾನ ಹಂಚಿದ್ದಾರೆ. ಜಾತಿ ನೋಡದೆ ದೈವ ದೇವಸ್ಥಾನಗಳಿಗೆ ಅಭಿವೃದ್ಧಿಗಾಗಿ ಅನುದಾನ ನೀಡಿದ್ದಾರೆ.ರಸ್ತೆಗಳು ಶಾಶ್ವತವಾಗಿ ವಿಸ್ತರಣೆಯಾಗಿ ಕಾಂಕ್ರಟೀಕರಣವಾಗಿದೆ. ಕುಡಿಯುವ ನೀರಿನ ಸೌಲಭ್ಯವನ್ನು ಹಳ್ಳಿಗಳಿಗೆ ನೀಡಲಾಗಿದೆ.

ಕಾಂಗ್ರೆಸ್ ಜಾತಿಯಾಧಾರಿತವಾಗಿ ಆಡಳಿತ ನಡೆಸುವುದಿಲ್ಲ. ಅಭಿವೃದ್ಧಿ ಕಾಯಕವನ್ನು ಮುಂದಿಟ್ಟು ಮತ ಕೇಳುತ್ತದೆ. ಜನತೆಗೆ ಶಾಂತಿ ,ನೆಮ್ಮದಿಯ ಜತೆ ಅಭಿವೃದ್ಧಿಯ ಸುರತ್ಕಲ್ ಪಟ್ಟಣವನ್ನು ನೋಡ ಬಯಸುತ್ತಾರೆ ಹೊರತು ಜಾತಿ ಸಂಘರ್ಷ, ಕೋಮು ದ್ವೇಷದ ನಗರವನ್ನಲ್ಲ. ಬಿಜೆಪಿ ಆಡಳಿತಕ್ಕೆ ಬಂದಲ್ಲಿ ಮತ್ತೆ ನೆಮ್ಮದಿಯ ವಾತಾವರಣ ಕೆಡಲಿದೆ ಎಂದು ಎಚ್ಚರಿಸಿದರು. ಕಾರ್ಯಕರ್ತರು ಸಾಧನೆಗಳ ಹರಿಕಾರ ಶಾಸಕ ಮೊದಿನ್ ಬಾವಾ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸ ಬೇಕಾಗಿದೆ ಎಂದರು.

ಶಾಸಕ ಬಾವಾ ಮಾತನಾಡಿ ಬಿಜೆಪಿಗೆ ಟೀಕಿಸಲು ಕಾರಣ ಸಿಗುತ್ತಿಲ್ಲ. ಹಕ್ಕುಪತ್ರ ನೀಡುವ ವಿಚಾರದಲ್ಲಿ ರಾಜಕೀಯ, ಬುದ್ದಿವಂತ ಮತದಾರರು ಕಾಂಗ್ರೆಸ್ ಏನು ಮಾಡಿದೆ, ಬಿಜೆಪಿ ಆಡಳಿತದಲ್ಲಿರುವಾಗ ಏನು ಮಾಡಿದೆ ಎಂಬುದನ್ನು ತಿಳಿದಿದ್ದಾರೆ. ಕೇಂದ್ರದ ಬಿಜೆಪಿ ಸರಕಾರ ಏನು ಮಾಡುತ್ತಿದೆ ಎಂಬುದನ್ನು ಮೊದಲು ಅವರು ಅರಿತುಕೊಳ್ಳಲಿ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಟ್ಟ ನಿಲುವು ಪ್ರದರ್ಶಿಸಿ ೫೦ ಸಾ.ರೂ ವರೆಗಿನ ರೈತರ ಸಾಲವನ್ನು ಮನ್ನಾ ಮಾಡಿದ್ದಾರೆ.ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದ ಸಂದರ್ಭ ತಲಾ ೧೫ ಲ.ರೂ ಹಾಕುವುದಾಗಿ ಭರವಸೆ ನೀಡಿದ್ದರೂ ಒಂದೂ ರೂ.ಯಾರ ಖಾತೆಗೂ ಬೀಳಲಿಲ್ಲ.ಮತ್ತೆ ಬ್ಯಾಂಕು ವ್ಯವಹಾರಗಳು ಶ್ರೀಮಂತರ ಪಾಲಾಗುತ್ತಿವೆ ಎಂದು ಟೀಕಿಸಿದರು.

ಮುಖಂಡರಾದ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ದೀಪಕ್ ಪೂಜಾರಿ, ಭಾಸ್ಕರ ಮೊಯಿಲಿ, ನವೀನ್ ಡಿಸೋಜ, ಕೆ.ಸದಾಶಿವ ಶೆಟ್ಟಿ, ವೈ. ರಮಾನಂದ ರಾವ್, ಕಾರ್ಪೊರೇಟರ್ ಬಶೀರ್ ಕಾಟಿಪಳ್ಳ, ಮೊಹಮ್ಮದ್ ,ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರತಿಭಾ ಕುಳಾಯಿ, ಮುಖ್ಯಸಚೇತಕ ಶಶಿಧರ ಹೆಗ್ಡೆ, ಮಲ್ಲಿಕಾರ್ಜುನ್, ಹಿಲ್ಡಾ ಆಳ್ವ, ಗುಲ್ಜಾರ್ ಬಾನು,ಗೋವರ್ಧನ್ ಶೆಟ್ಟಿಗಾರ್, ಮಂಗಳೂರು ಬಾವಾ, ಬಶೀರ್ ಬೈಕಂಪಾಡಿ, ಸಮಿತಿಯ ಪದಾಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English