ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದ ನಟ ದರ್ಶನ್..!

4:00 PM, Saturday, May 5th, 2018
Share
1 Star2 Stars3 Stars4 Stars5 Stars
(No Ratings Yet)
Loading...

Darshanಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರಕ್ಕೆ ಒಬ್ಬರಾದಂತೆ ಒಬ್ಬರು ಬಂದು ಸಿಎಂ ಪರ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಪ್ರಚಾರದ ಬಿಸಿ ದಿನದಿಂದ ದಿನಕ್ಕೆ ಏರತೊಡಗಿದ್ದು , ಸಿನೆಮಾ ಲೋಕದ ಕೆಲವರು ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದಿದ್ದಾರೆ.

ಶನಿವಾರ ನಟ ದರ್ಶನ್ ‌ ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದರು. ಆದರೆ ನಾಗನಹಳ್ಳಿಯಲ್ಲಿ ಜೆಡಿಎಸ್ ‌ ಕಾಯಕರ್ತರು ದರ್ಶನ್ ವಿರುದ್ಧ ಪ್ರತಿಭಟನೆ ನಡೆಸಿದರು.

ದರ್ಶನ್ ಹಿರಿಯ ರಾಜಕಾರಣಿ ಅಂಬರೀಷ್ ‌ಅವರ ಸಚಿವ ಸ್ಥಾನ ಕಸಿದುಕೊಂಡಾಗ ಮಾತನಾಡಿರಲಿಲ್ಲ. ಕಾವೇರಿ ನೀರಿನ ಪರ ಹೋರಾಟ ಮಾಡಿರಲಿಲ್ಲ ಎಂದು ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಜೆಡಿಎಸ್ ‌ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ ನಡೆಸಿದರು. ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಸ್ಧಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English