6 ದಿನಗಳಲ್ಲಿ ಮನೆಗೆ ಹೋಗಲಿರುವ ಸಿಎಂ ಬಗ್ಗೆ ಮಾತನಾಡಲ್ಲ: ಬಿಎಸ್‌ವೈ

4:17 PM, Monday, May 7th, 2018
Share
1 Star2 Stars3 Stars4 Stars5 Stars
(No Ratings Yet)
Loading...

yedeyurappaಕೊಪ್ಪಳ: ಇನ್ನು ಕೇವಲ ಆರು ದಿನಗಳಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ಮನೆಗೆ ಹೋಗುವವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಯೋಗ್ಯತೆ ಇದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಬೇಕಿತ್ತು. ಆದರೆ, ಬಾದಾಮಿಗೆ ಯಾಕೆ ಬಂದು ಸ್ಪರ್ಧಿಸಿದ್ದಾರೆ. ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತ ಎಂದರು.

ನಾನು ಗೆಲ್ಲುತ್ತೇನೆ, ನಾನೇ ದಂಡನಾಯಕ ಎಂದು ಸಿದ್ದರಾಮಯ್ಯ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ಮೊದಲು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಾ. ಜಿ. ಪರಮೇಶ್ವರ್ ಒಂದೇ ವೇದಿಕೆಯಲ್ಲಿ ಬಂದು ಕುಳಿತುಕೊಳ್ಳಲಿ. ಆಮೇಲೆ ಅವರು ತಮ್ಮ ಗೆಲುವಿನ ಬಗ್ಗೆ ಮಾತನಾಡಲಿ ಎಂದು ಟೀಕಿಸಿದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ವಿದೂಷಕರಿದ್ದಂತೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಬಿಎಸ್‌ವೈ, ಈ ಬಾರಿ 20 ಸ್ಥಾನದಲ್ಲಿಯೂ ಅವರು ಗೆಲ್ಲಲ್ಲ. ಅವರ ಬಗ್ಗೆ ನಾನು ಉತ್ತರಿಸುವುದಿಲ್ಲ ಎಂದು ಹೆಚ್‌ಡಿಕೆಗೂ ಟಾಂಗ್‌ ಕೊಟ್ಟರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English