ನಾನು ಹಿಂದೂಗಳ ಮತ ಬೇಡ ಅಂತ ಹೇಳಿಲ್ಲ : ರಮಾನಾಥ್ ರೈ

5:09 PM, Tuesday, May 8th, 2018
Share
1 Star2 Stars3 Stars4 Stars5 Stars
(No Ratings Yet)
Loading...

ramanath-raiಮಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಪ್ರಬಲ ಶಕ್ತಿಯಾಗಿ ಹೊರಹೊಮ್ಮುವ ಸೂಚನೆ ಸಿಕ್ಕಿದೆ ಎಂದು ಸಚಿವ ರಮಾನಾಥ್ ರೈ ಹೇಳಿದ್ರು.

ನಗರದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ನಮ್ಮ ಸಾಧನೆಯನ್ನು ಜನರು ಒಪ್ಪಿಕೊಂಡಿದ್ದಾರೆ. ಆದರೆ, ಬಿಜೆಪಿಗೆ ಅಪಪ್ರಚಾರವೇ ಚುನಾವಣಾ ಅಸ್ತ್ರ. ಇದಕ್ಕೆ ಕಿವಿಗೊಡಬೇಡಿ. ಅಭಿವೃದ್ಧಿಗೆ ಬೆಂಬಲ ಕೊಡಿ, ನಮಗೆ ಮತ ನೀಡಿ ಎಂದು ಮನವಿ ಮಾಡಿದರು.

ಇನ್ನು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಹಿಂದೂಗಳ ಮತ ಬೇಡ ಅಂತ ಹೇಳಿಲ್ಲ. ತಲೆಕಟ್ಟವರು ಮಾತ್ರ ಇಂತಹ ಮಾತಾಡಲು ಸಾಧ್ಯ. ನನ್ನ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ಮತೀಯ ವಿಚಾರದಿಂದ ಗಮನಸೆಳೆಯುವ ಕಾರ್ಯ ಮಾಡುತ್ತಿದ್ದಾರೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English