8 ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು: ಮೋನಪ್ಪ ಭಂಡಾರಿ

4:28 PM, Thursday, May 10th, 2018
Share
1 Star2 Stars3 Stars4 Stars5 Stars
(No Ratings Yet)
Loading...

nalin-kumarಮಂಗಳೂರು: ದ.ಕ. ಜಿಲ್ಲೆಯ 8 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ದ.ಕ. ಜಿಲ್ಲಾ ಚುನಾವಣಾ ಉಸ್ತುವಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಹೇಳಿದರು.

ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೆ ಪಕ್ಷದ ಕಾರ್ಯಕರ್ತರು 2-3 ಸುತ್ತಿನ ಮನೆ ಮನೆ ಭೇಟಿ ನೀಡಿದ್ದಾರೆ. ಎಲ್ಲರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಇದನ್ನು ಕಂಡು ಜಿಲ್ಲಾ ಉಸ್ತುವಾರಿ ಸಚಿವರಿಗೆ ನಡುಕ ಶುರುವಾಗಿದೆ. ಹಾಗಾಗಿ ಅವರೀಗ ಹಿಂದುತ್ವದ ಪರ ಮಾತನಾಡುತ್ತಿದ್ದಾರೆ. ಜಿಲ್ಲೆಯ ಕಾಂಗ್ರೆಸ್‌ನ ಶಾಸಕರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದೆ. ಹಾಗಾಗಿ ಜಿಲ್ಲೆಯ ಮತದಾರರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್, ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್, ಡಾ.ಅಣ್ಣಯ್ಯ ಕುಲಾಲ್, ರವಿಶಂಕರ್ ಮಿಜಾರು, ಕಿಶೋರ್ ರೈ ಮತ್ತಿತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English