ಕಾರ್ಕಳ: ಬಿಜೆಪಿ ಮುಖಂಡ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸತತ ಮಾರನೇ ಬಾರಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಲು ಕಾತರದಿಂದ ಇದ್ದಾರೆ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರುದ್ಧ ಅಲೆ ಇದ್ದರೂ ಕೂಡ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಜಯಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಸುನೀಲ್ ಕುಮಾರ್ ಅವರು ಈ ಬಾರಿಯ ಚುನಾವಣೆಯಲ್ಲಿ ಇನಷ್ಟು ಮತಗಳ ಅಂತರದಿಂದ ಜಯಗಳಿಸಬಹುದು ಎಂದು ಜನರು ಲೆಕ್ಕ ಹಾಕುತ್ತಿದ್ದಾರೆ.
ಬಿಜೆಪಿ ಮುಖಂಡ ಕಾರ್ಕಳದ ಹಾಲಿ ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಾತ್ಮಕ ಮಾತು ಮತ್ತುಧರ್ಮ ಹಾಗೂ ಧರ್ಮಗಳ ನಡುವೆ ಸೌಹಾರ್ದತೆಗೆ ಭಂಗ ತಂದ ಆರೋಪದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಬಂಟ್ವಾಳ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಲ್ಲಡ್ಕದಲ್ಲಿ ನಡೆದಬಿಜೆಪಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುನೀಲ್ ಕುಮಾರ್ ಸಾರ್ವಜನಿಕರಿಗೆ ಪ್ರಚೋದನಾತ್ಮಕವಾಗಿ ಮಾತನಾಡಿ, ಜನರಲ್ಲಿ ಧಾರ್ಮಿಕ ದ್ವೇಷ ಉಂಟಾಗುವಂತೆ ಮಾಡಿದ್ದು, ಧರ್ಮ, ಧರ್ಮಗಳ ನಡುವೆ ಸೌಹಾರ್ದತೆಗೆ ಭಂಗ ತಂದಿದ್ದಾರೆ ಎಂದು ಕಾಂಗ್ರೆಸ್ಸಿನವರು ದೂರು ದಾಖಲಿಸಿದ್ದರು. ಸುನೀಲ್ ಕುಮಾರ್ ಕಟ್ಟಾ ಹಿಂದೂತ್ವವಾದಿಯಾಗಿದ್ದು, ಇತರರಂತೆ ರಾಜಿ ಮಾಡಿಕೊಳ್ಳುವ ವ್ಯಕ್ತಿಯೇ ಅಲ್ಲ ಎನ್ನಲಾಗುತ್ತಿದೆ.
2018ರ ಚುನಾವಣೆಯಲ್ಲಿ ಅಲ್ಲಾ ಮತ್ತು ರಾಮನ ನಡುವೆನಡೆಯುವ ಚುನಾವಣೆಯಾಗಿದ್ದು, ರಮಾನಾಥ ರೈ ಮತ್ತು ರಾಜೇಶ್ ನಾಯ್ಕ್ ನಡುವೆ ನಡೆಯುವ ಚುನಾವಣೆಯಲ್ಲ ಎಂದು ಹೇಳಿದ್ದಲ್ಲದೆ, ಅಲ್ಲಾನನ್ನು ಪ್ರೀತಿಸೋ ವ್ಯಕ್ತಿಗೆ ಮತಹಾಕ್ತೀರೋ ಅಥವಾ ರಾಮನನ್ನು ಪ್ರೀತಿಸೋ ವ್ಯಕ್ತಿಗೆ ಮತ ಹಾಕುತ್ತೀರೋ ಎಂದು ಸಾರ್ವಜನಿಕವಾಗಿ ಸುನೀಲ್ ಕುಮಾರ್ ಹೇಳಿದ್ದು ದೇಶವ್ಯಾಪ ಸುದ್ದಿ ಆಗಿತ್ತು.
Click this button or press Ctrl+G to toggle between Kannada and English