ಸರ್ಕಾರ ರಚಿಸಲು ಜೆಡಿಎಸ್ ಗೆ ಬೆಂಬಲ: ಸಿದ್ದರಾಮಯ್ಯ

3:45 PM, Tuesday, May 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

merged-jdsಬೆಂಗಳೂರು: ಮತದಾರರ ತೀರ್ಪಿಗೆ ತಲೆಬಾಗಿದ್ದೇವೆ. ಜನರ ತೀರ್ಪನ್ನು ಒಪ್ಪಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಇದೇ ಮೊದಲ ಬಾರಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡು ಮಾತನಾಡಿದ ಸಿಎಂ, ರಾಜ್ಯದಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಯಾರಿಗೂ ಸ್ವತಂತ್ರ ಸರ್ಕಾರ ರಚನೆ ಮಾಡಲು ಆಗಲ್ಲ.

ಹೀಗಾಗಿ ಕಾಂಗ್ರೆಸ್ ಒಂದು ತೀರ್ಮಾನಕ್ಕೆ ಬಂದಿದೆ. ಜಾತ್ಯತೀತ ಹಿನ್ನೆಲೆಯಿರುವ ಪಕ್ಷಕ್ಕೆ ಬೆಂಬಲ, ಜೆಡಿಎಸ್ ಗೆ ಸರ್ಕಾರ ರಚಿಸಲು ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಿದೆ ಎಂದು ಹೇಳಿದರು.

ಜನಾದೇಶವನ್ನು ಗೌರವಿಸುತ್ತೇವೆ. ಜೆಡಿಎಸ್ ಗೆ ಬಂಬಲ ಕೊಡುವುದು ಎಐಸಿಸಿ ನಿರ್ಧಾರ. ಜಾತ್ಯತೀತ ಹಿನ್ನೆಲೆಯಿರುವ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಲಾಗಿದೆ. ಸರ್ಕಾರ ರಚಿಸಲು ಜೆಡಿಎಸ್ ಗೆ ಬೆಂಬಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English