- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

resigns [1]ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಜನಾದೇಶ ಪಡೆಯುವ ಕಾಲ ಇದೀಗ ಬಂದಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನವಾಗಿದೆ.

ಚುನಾವಣಾ ಪೂರ್ವ ಸಮೀಕ್ಷೆ, ಅಭಿಪ್ರಾಯಗಳ ಸಂಗ್ರಹ ಕುತೂಹಲಕಾರಿ ಫಲಿತಾಂಶವನ್ನು ನೀಡಿದೆ. ಆದರೆ, ಅಂತಿಮ ಜನಾದೇಶ ಇಂದು(ಮೇ 15) ಮಧ್ಯಾಹ್ನ ಹೊರಬೀಳಲಿದೆ.  ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಲ್ಲದೆ ಸರಿ ಸುಮಾರು 28ಕ್ಕೂ ಅಧಿಕ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

2,622 ಅಭ್ಯರ್ಥಿಗಳಿದ್ದು, ಪುರುಷ ಅಭ್ಯರ್ಥಿಗಳು 2,405, ಮಹಿಳೆಯರು 217. ಮತ ಎಣಿಕೆ ಶುರುವಾಗಿಲ್ಲ, ಟ್ವೀಟಿಗರು ಆಗಲೇ ಭವಿಷ್ಯ ನುಡಿತಾವ್ರಲ್ಲ.! ಪಕ್ಷವಾರು: ಬಿಜೆಪಿ 222, ಕಾಂಗ್ರೆಸ್ 220, ಜೆಡಿಎಸ್ 199, ಬಿಎಸ್ಪಿ 18, ಇತರೆ 1963. 2013ರಲ್ಲಿ ಶೇ 71.45ರಷ್ಟು ಮಾತ್ರ ಮತದಾನ ದಾಖಲಾಗಿತ್ತು. 2018ರಲ್ಲಿ ಶೇ 72ರಷ್ಟು ಮತದಾನವಾಗಿದೆ.