- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದೇವರ, ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿಎಸ್‌ವೈ

yedeyurappa [1]ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ದೇವರ ಮತ್ತು ರೈತರ ಹೆಸರಲ್ಲಿ ಬಿಎಸ್‌ವೈ ಪದಗ್ರಹಣ ಮಾಡಿದರು. ರಾಜ್ಯಪಾಲ ವಜುಭಾಯ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಜಗದೀಶ್ ಶೆಟ್ಟರ್, ಈಶ್ವರಪ್ಪ, ಶ್ರೀರಾಮುಲು, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಮುಖ್ಯಮಂತ್ರಿಯಾಗಿ ಬಿಎಸ್‌ವೈ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತು.