ಹಂಗಾಮಿ ಸ್ಪೀಕರ್ ಬೋಪಯ್ಯ ಉಸ್ತುವಾರಿಯಲ್ಲಿ ನೂತನ ಶಾಸಕರ ಪ್ರಮಾಣ ವಚನ

7:33 PM, Friday, May 18th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

KG Bopaiahಬೆಂಗಳೂರು: ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಶುಕ್ರವಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಕೆಜಿ ಬೋಪಯ್ಯ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಬೋಪಯ್ಯ ಅವರ ಉಸ್ತುವಾರಿಯಲ್ಲಿ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಹಾಗೂ ಬಹುಮತ ಸಾಬೀತು ಪ್ರಕ್ರಿಯೆ ನಡೆಯಲಿದೆ.

ವಿಶ್ವಾಸ ಮತಯಾಚನೆಯನ್ನು ರಹಸ್ಯ ಮತದಾನದ ಮೂಲಕ ಮಾಡಬೇಕೆಂದು ಬಿಜೆಪಿ ಬಯಸಿತ್ತು. ಆದರೆ, ಸುಪ್ರೀಂ ಕೋರ್ಟ್‌ ತನ್ನ ಲಿಖಿತ ಆದೇಶದಲ್ಲಿ, ನಾಳೆ ನಡೆಯುವ ವಿಶ್ವಾಸ ಮತ ಯಾಚನೆಯಲ್ಲಿ ರಹಸ್ಯ ಮತದಾನ ನಡೆಸಕೂಡದು ಎಂದು ಸೂಚಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English