- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗೈರಾಗಿರುವ ಶಾಸಕರನ್ನು ಅವರೇ ಕರೆ ತರ್ತಾರೆ… ನಮ್ಮಲ್ಲೂ ರಣತಂತ್ರ ಸಿದ್ಧ: ಡಿ.ಕೆ.ಶಿವಕುಮಾರ್

D-k-shivkumar [1]ಬೆಂಗಳೂರು: ವಿಧಾ‌ಸಭೆಯಲ್ಲಿ ಕಾಂಗ್ರೆಸ್‌ನ ಆನಂದ್ ಸಿಂಗ್ ಹಾಗೂ ಪ್ರತಾಪ್ ಗೌಡ ಪಾಟೀಲ್ ಇಲ್ಲ. ಆದರೆ ನಾವು ಅವರ ಸಂಪರ್ಕದಲ್ಲಿದ್ದು, ಅವರು ನಮ್ಮ ಪರವಾಗಿಯೇ ಮತ ಚಲಾಯಿಸಲಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಇಬ್ಬರು ಶಾಸಕರನ್ನು ಬಿಟ್ಟು ಎಲ್ಲಾ ಶಾಸಕರೂ ಸದನದಲ್ಲಿ ಹಾಜರಿದ್ದಾರೆ. ಅವರನ್ನು ಯಾರು ಕರೆದುಕೊಂಡು ಹೋಗಿದ್ದಾರೋ ಅವರೇ ಕರೆದುಕೊಂಡು ಬರಲಿದ್ದಾರೆ. ಆದರೆ ಅವರು ಯಾವ ಪಕ್ಷದಿಂದ ಆಯ್ಕೆಯಾಗಿದ್ದಾರೋ ಆ ಪಕ್ಷದ‌ ಪರ ಇರಲಿದ್ದಾರೆ ಎಂದರು.

ಬಿಜೆಪಿಯ ಸೋಮಶೇಖರ ರೆಡ್ಡಿ ಕೂಡ‌ ಸದ‌ನದಲ್ಲಿ‌ ಇಲ್ಲ. ಅವರು ಆನಂದ್ ಸಿಂಗ್ ಹಾಗೂ ಪ್ರತಾಪ್ ಗೌಡ ಪಾಟೀಲ್ ಜೊತೆ ಇರಬೇಕು. ಆದರೆ ಈ ಬಗ್ಗೆ ನಮಗೆ ಚಿಂತೆ ಇಲ್ಲ. ಬೇರೆಯವರ ಬಗ್ಗೆ ನಾವು ಯೋಚನೆ ಮಾಡಲ್ಲ. ನಮ್ಮ‌ ಸದಸ್ಯರ ಬಗ್ಗೆ ಮಾತ್ರ ನಾವು ಯೋಚಿಸುತ್ತೇವೆ. ಅವರಿಬ್ಬರೂ ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ನಿರೀಕ್ಷೆಯಲ್ಲಿ‌ದ್ದೇವೆ. ಅವರು ಗೆದ್ದ ಪಕ್ಷದ ಪರವೇ ಇರಲಿದ್ದಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಆದಾಯ ತೆರಿಗೆ ಇಲಾಖೆಯಿಂದ ಬೆದರಿಕೆಯ ತಂತ್ರ ನಡೆಯಿತ್ತಿದೆ. ಆದರೂ ಸದನದಲ್ಲಿ ನಾವು ಬಹುಮತ ಸಾಬೀತುಪಡಿಸುತ್ತೇವೆ. ಬಿಜೆಪಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸಿದ್ದೇವೆ. ಆದರೆ ನಮ್ಮ ತಂತ್ರವನ್ನು ನಾವು ಬಹಿರಂಗಪಡಿಸಲ್ಲ ಎಂದರು.