[1]ಬೆಂಗಳೂರು: ಸೋಲುವ ಹತಾಶೆಯಲ್ಲಿ ಕಾಂಗ್ರೆಸ್ಸಿಗರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇಂದು ಸಂಜೆ ಸ್ಪಷ್ಟ ಬಹುಮತ ಸಾಬೀತುಪಡಿಸಿ, ಸರ್ಕಾರವನ್ನು ರಚಿಸಲಿದ್ದೇವೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಭರವಸೆ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಕ್ಷಣಗಣನೆ ಆರಂಭವಾಗಿರುವ ಮಧ್ಯೆ ಟ್ವೀಟ್ ಮಾಡಿರುವ ಶ್ರೀರಾಮುಲು, ಬಹುಮತ ಸಾಬೀತು ಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೋಲುವ ಹತಾಶೆಯಲ್ಲಿ ಕಾಂಗ್ರೆಸ್ಸಿಗರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.ಇಂದು ಸಂಜೆ ಬಿಜೆಪಿಗೆ ಸ್ಪಷ್ಟ ಬಹುಮತ ಸಾಬೀತು ಆಗಲಿದೆ ಮತ್ತು ಸರ್ಕಾರವನ್ನು ರಚಿಸಲಿದ್ದೇವೆ ಆ ಮೂಲಕ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಒಯ್ಯಲಿದ್ದೇವೆ.
ಇಂದು ಸಂಜೆ 4ಕ್ಕೆ ಬಿಎಸ್ವೈ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಆ ಮೂಲಕ ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಒಯ್ಯಲಿದ್ದೇವೆ ಎಂದು ಶ್ರೀರಾಮುಲು ಭರವಸೆ ವ್ಯಕ್ತಪಡಿಸಿದ್ದಾರೆ.