ಸದನದಲ್ಲಿ ನಮಗೆ ಬಹುಮತ ಸಾಬೀತಾಗುವುದು ಖಚಿತ: ಡಿ.ಕೆ. ಶಿವಕುಮಾರ್

3:13 PM, Saturday, May 19th, 2018
Share
1 Star2 Stars3 Stars4 Stars5 Stars
(4 rating, 1 votes)
Loading...

shivkumarಬೆಂಗಳೂರು: ನಮ್ಮ ಎಲ್ಲಾ ಶಾಸಕರೂ ಕಾಂಗ್ರೆಸ್ ಪರವಾಗಿ ಓಟ್ ಮಾಡಲಿದ್ದಾರೆ. ಸದನದಲ್ಲಿ ನಮಗೆ ಬಹುಮತ ಸಾಬೀತಾಗುವುದು ಖಚಿತ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಪ್ರತಾಪ್ ಗೌಡ, ಆನಂದ್ ಸಿಂಗ್ ಅವರನ್ನು ಯಾರು ಕರ್ಕೊಂಡು ಹೋಗಿದ್ದಾರೆ ಎಂದು ನಾನು ನನ್ನ ಬಾಯಲ್ಲಿ ಹೇಳುವುದಿಲ್ಲ. ಆನಂದ್ ಸಿಂಗ್ ಕೆಲವೇ ಕ್ಷಣಗಳಲ್ಲಿ ಆಗಮಿಸಲಿದ್ದಾರೆ. ನಮ್ಮ ಪರವಾಗಿ ಮತ ಹಾಕಲಿದ್ದಾರೆ ಎಂದು ಹೇಳಿದರು.

ಪ್ರತಾಪ್ ಗೌಡ ಪಾಟೀಲ್ ಪ್ರಮಾಣವಚನ ಸ್ವೀಕರಿಸುತ್ತಾರೆ. ಪ್ರತಾಪ್ ಗೌಡ ಕಾಂಗ್ರೆಸ್ ಪರವಾಗಿದ್ದಾರೆ. ಯಡಿಯೂರಪ್ಪ ವಿರುದ್ಧ ಮತ ಹಾಕಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English