[1]ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಶಾಸಕ ಆನಂದ್ ಸಿಂಗ್ ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದೆ. ವಿಶ್ವಾಸಮತ ಯಾಚನೆಗೆ ಸಮಯ ನಿಗದಿಯಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ವಿಧಾನಸೌಧ ಆವರಣಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಆನಂದ್ ಸಿಂಗ್ ಅವರನ್ನು ಕೈಹಿಡಿದುಕೊಂಡು ಡಿಕೆಶಿ ವಿಧಾನಸಭೆಗೆ ಕರೆದೊಯ್ದರು. ವಿಧಾನಸೌಧದೊಳಕ್ಕೂ ಡಿಕೆಶಿ ಕೈಹಿಡಿದುಕೊಡೇ ಸಾಗಿದ ಶಾಸಕ ನಾಗೇಂದ್ರ ಅವರು ಹಿರಿಯ ಕಾಂಗ್ರೆಸ್ ಮುಖಂಡರಿಗೆ ವಿಶ್ ಮಾಡಿದರು.
ಬಳಿಕ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರಿಗೂ ವಿಶ್ ಮಾಡಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.