[1]ಮಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ವಿಶ್ವಾಸಮತ ಯಾಚಿಸದೆ ರಾಜೀನಾಮೆ ನೀಡಿದ ಸಂದರ್ಭದಲ್ಲಿ ಸಂಭ್ರಮಾಚರಣೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಂಗಳೂರಿನ ಜಯಪ್ರಶಾಂತ್ ಎಂಬುವವರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ವಿಡಿಯೋವನ್ನು ತಿರುಚಿ ಅದರಲ್ಲಿ ಪಾಕಿಸ್ತಾನ ಪರ ಘೋಷಣೆ ಹಾಕಲಾಗಿದ್ದು, ಈ ರೀತಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಜೆ.ಆರ್.ಲೋಬೋ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಆಯುಕ್ತರಿಗೆ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಜಯಪ್ರಶಾಂತ್ ದೂರು ನೀಡಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.