ಯಾರಿಗೂ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ: ಆನಂದ್‌ ಸಿಂಗ್‌ಗೆ ಡಿಕೆಶಿ ಮನವರಿಕೆ?

1:12 PM, Tuesday, May 22nd, 2018
Share
1 Star2 Stars3 Stars4 Stars5 Stars
(No Ratings Yet)
Loading...

anand-singhಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮೂರು ತಿಂಗಳ ಮೊದಲು ಬಿಜೆಪಿ ಬಿಟ್ಟು ಕಾಂಗ್ರೆಸ್‌‌ ಸೇರಿಕೊಂಡು, ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್‌ಗೆ ಕಾಂಗ್ರೆಸ್‌ ಮುಖಂಡ ಡಿಕೆಶಿ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಹಿಲ್ಟನ್‌ ಹೋಟೆಲ್‌ನಲ್ಲಿ ತಂಗಿರುವ ಕಾಂಗ್ರೆಸ್‌ ನಾಯಕರ ಭೇಟಿಗೆ ತೆರಳಿದ್ದ ಡಿಕೆಶಿ, ಶಾಸಕ ಆನಂದ್‌ ಸಿಂಗ್‌ ಜತೆಗೆ ಪ್ರತ್ಯೇಕ ಮಾತುಕತೆ ನಡೆಸಿದರು. ನಿಮಗೆ ಯಾವುದೇ ಬೆದರಿಕೆ ಬಂದರೂ ನಿಮ್ಮ ಬೆಂಬಲಕ್ಕೆ ಇರುತ್ತೇವೆ. ನೀವು ಭಯಪಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆನಂದ್‌ ಸಿಂಗ್‌ಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ನಾಳೆ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಕಾಂಗ್ರೆಸ್ ಜತೆ ಇರುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸಭೆ ಅತಂತ್ರ ಫಲಿತಾಂಶದ ನಂತರ ಸರ್ಕಾರ ರಚನೆಗೆ ಕಸರತ್ತುಗಳು ಆರಂಭವಾಗಿದ್ದ ಬೆನ್ನಲ್ಲೇ ವಿಜಯನಗರ ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಎರಡು ದಿನ ಯಾರ ಸಂಪರ್ಕಕ್ಕೂ ಸಿಗದೆ ಆತಂಕ ಮೂಡಿಸಿದ್ದರು. ಬಳಿಕ ವಿಧಾನಸಭೆಯಲ್ಲಿ ಪ್ರತ್ಯಕ್ಷರಾಗಿ ಕೊನೆಗೂ ಕಾಂಗ್ರೆಸ್‌ ನಾಯಕರು ನಿಟ್ಟುಸಿರು ಬಿಡುವಂತೆ ಮಾಡಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English