[1]ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು, ಉಜಿರೆ ಇದೇ ವಾರ್ಷಿಕ ಕ್ರೀಡಾಕೂಟವನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಇವರು ಉದ್ಘಾಟಿಸಿದರು.
ಉಜಿರೆಯ ಪ್ರಕೃತಿ ವಿಜ್ಞಾನ ಮತ್ತು ಯೋಗ ಕಾಲೇಜು ಇತ್ತೀಚಿನ ದಿನದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಪಡೆದಿದೆ. ಭಾರತದ ವಿವಿಧ ರಾಜ್ಯಗಳಿಂದ ಮತ್ತು ವಿದೇಶದಿಂದ ಬಂದು ವ್ಯಾಸಾಂಗ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ.ಧ.ಮ. ಎಜುಕೇಶನ್ ಟ್ರಸ್ಟ್ನ ಕಾರ್ಯನಿರ್ವಾಹಣ ಅಧಿಕಾರಿ ವಂದಿಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಶುಪಾಲರಾದ ಡಾ.ಪ್ರಶಾಂತ್ ಶೆಟ್ಟಿ ಇವರು ಸ್ವಾಗತ ಮಾಡಿದರು, ವೇದಿಕೆಯಲ್ಲಿ ಶ್ರೀ.ಧ.ಮ. ಕಾಲೇಜಿನ ದೈಹಿಕ ನಿರ್ದೇಶಕರಾದ ಶ್ರೀಯುತ ರಮೇಶ್ ಹೆಚ್, ಉಪಸ್ಥಿತರಿದ್ದರು ಹಾಗೂ ಕಾಲೇಜಿನ ದೈಹಿಕ ನಿರ್ದೇಶಕರಾದ ಶ್ರೀಯುತ ಧರ್ಮೇಂದ್ರ ಕುಮಾರ್ ಬೆಳಾಲು ಧನ್ಯವಾದ ನೀಡಿ ಕಾಲೇಜಿನ ವಿದ್ಯಾರ್ಥಿನಿಯರು ನಿರೂಪಣೆ ಮಾಡಿದರು.