ಸಾಯಿಬಾಬಾ ಪಾದುಕೆ ದರ್ಶನ ಪಡೆದ ಭಕ್ತರು

9:55 AM, Thursday, May 24th, 2018
Share
1 Star2 Stars3 Stars4 Stars5 Stars
(No Ratings Yet)
Loading...

sai-babaಮಂಗಳೂರು: ಶಿರಡಿಯಿಂದ ಮಂಗಳೂರಿನ ಉರ್ವ ಚಿಲಿಂಬಿಯ ಶಿರಡಿ ಸಾಯಿ ಬಾಬಾ ಮಂದಿರಕ್ಕೆ ಆಗಮಿಸಿದ ಸಾಯಿ ಬಾಬಾರ ಪವಿತ್ರ ಪಾದುಕಾ ದರ್ಶನ ಕಾರ್ಯಕ್ರಮದಲ್ಲಿ ಬುಧವಾರ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಸಾಯಿ ಬಾಬಾರವರು ಧರಿಸುತ್ತಿದ್ದ ಶ್ರೀ ಪಾದುಕೆಯನ್ನು ದರ್ಶನಾರ್ಥವಾಗಿ ಶಿರಿಡಿಯಿಂದ ಚಿಲಿಂಬಿಯ ಸಾಯಿ ಬಾಬಾ ಮಂದಿರಕ್ಕೆ ತರಲಾಗಿತ್ತು.

ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಭಾಗವಹಿಸಿ ಪಾದುಕೆಯ ದರ್ಶನ ಪಡೆದರು. ಸಂಜೆ ಪಟ್ಲಸತೀಶ್ ಶೆಟ್ಟಿ ಮತ್ತು ಬಳಗದವರಿಂದ ಶ್ರೀ ಸಾಯಿ ಯಕ್ಷಾರಾಧನೆ ಕಾರ್ಯಕ್ರಮ ಕೂಡ ಆಯೋಜಿಸಲಾಗಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English