ಬಿಜೆಪಿ ಇಂದಿಗೂ ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿದೆ: ಪರಮೇಶ್ವರ್‌

11:37 AM, Friday, May 25th, 2018
Share
1 Star2 Stars3 Stars4 Stars5 Stars
(No Ratings Yet)
Loading...

congressಬೆಂಗಳೂರು: ಬಿಜೆಪಿ ಶಾಸಕರು ಇಂದಿಗೂ ಕೂಡ ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ. ಆದರೆ ನಮ್ಮ ಶಾಸಕರು ಯಾವುದೇ ಆಮಿಷಕ್ಕೆ ಒಳಗಾಗಲ್ಲ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ವಿಶ್ವಾಸಮತ ಯಾಚನೆ ಇದ್ದು, ವಿಶ್ವಾಸಮತ ಸಾಬೀತು ಪಡಿಸುವ ವಿಶ್ವಾಸವಿದೆ. ವಿಶ್ವಾಸಮತ ಯಾಚನೆ ಜೊತೆ ಸ್ಪೀಕರ್ ಚುನಾವಣೆ ಕೂಡ ಇದೆ. ಶಾಸಕ ರಮೇಶ್ ಕುಮಾರ್ ಸ್ಪೀಕರ್ ಚುನಾವಣೆಯಲ್ಲಿ ಗೆದ್ದು ಸ್ಪೀಕರ್ ಆಗಲಿದ್ದಾರೆ. ನಮ್ಮಲ್ಲಿ ಹೆಚ್ಚು ಸ್ಥಾನಗಳು ಇರುವುದರಿಂದ ರಮೇಶ್ ಕುಮಾರ್ ಸ್ಪೀಕರ್ ಆಗಿ ಆಯ್ಕೆ ಆಗುತ್ತಾರೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ಇನ್ನು ಪರೋಕ್ಷವಾಗಿ ಆರ್.ಆರ್. ನಗರ ಕ್ಷೇತ್ರದ ಅಭ್ಯರ್ಥಿ ಮುನಿರತ್ನ ಪರ ಬ್ಯಾಟಿಂಗ್ ಮಾಡಿದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಆರ್.ಆರ್. ನಗರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಸಹಕಾರ ನೀಡುವಂತೆ ಜೆಡಿಎಸ್‌‌ಗೆ ಮನವಿ ಮಾಡಿದ್ದೇವೆ. ಜೆಡಿಎಸ್‌‌ನವರು ಕೂಡ ತಮ್ಮ ಶಾಸಕರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಮೈತ್ರಿ ಸರ್ಕಾರ ಇರುವುದರಿಂದ ನಮ್ಮ ಅಭ್ಯರ್ಥಿಗೆ ಸಹಕಾರ ನೀಡುವಂತೆ ಜೆಡಿಎಸ್‌ನ್ನು ಕೇಳಿಕೊಂಡಿದ್ದೇವೆ. ಚುನಾವಣಾ ಕಣದಿಂದ ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English