[1]ಸುಳ್ಯ: ಇತ್ತೀಚೆಗೆ ಸುಳ್ಯದಲ್ಲಿ ನಡೆದ ವಿದ್ಯುತ್ ಅವಘಡದಲ್ಲಿ ಬಂಟ್ವಾಳ ತಾಲೂಕಿನ ಸುವರ್ಣನಾಡಿನ ಗಣೇಶ್ ಮುಗುಳಿಯ ಎಂಬವರು ಮೃತಪಟ್ಟಿದ್ದರು.
ಅವರ ಮನೆಗೆ ಬಂಟ್ವಾಳದ ಶಾಸಕರಾದ ರಾಜೇಶ್ ನಾೈಕ್ ಉಳಿಪ್ಪಾಡಿಯವರು ಭೇಟಿ ನೀಡಿ, ಕುಟುಂಬವರ್ಗಕ್ಕೆ ಸಾಂತ್ವಾನ ಹೇಳಿ ಮೆಸ್ಕಾಂ ಅಧಿಕಾರಿಗಳಿಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಗಬೆಟ್ಟುವಿನ ಮಾಜಿ ತಾ.ಪಂ ಸದಸ್ಯರಾದ ಪ್ರಭಾಕರ ಪ್ರಭು, ಬಿಜೆಪಿ ರೈತಮೋರ್ಚಾದ ನಂದರಾಮ ರೈ,ಪಂಜಿಕಲ್ಲು ಗ್ರಾ.ಪಂ ಉಪಾಧ್ಯಕ್ಷರಾದ ಲಕ್ಷ್ಮಣ್ ಪಂಜಿಕಲ್ಲು, ಸದಸ್ಯರಾದ ಬಾಲಕಕೃಷ್ಣ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸುರೇಶ್ ಪೂಜಾರಿ, ಸದಾಶಿವ,ವಿಶ್ವನಾಥ,ಚಂದ್ರ, ಕೃಷ್ಣಪ್ಪ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.