ಕರ್ನಾಟಕ ಬಂದ್ ಗೆ ಕರೆ ಕೊಟ್ಟ ಬಿಎಸ್ವೈ ವಿರುದ್ಧ ಡಿಜಿಪಿಗೆ ದೂರು

4:16 PM, Saturday, May 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

yedyurappa-prಬೆಂಗಳೂರು: ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದ ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು ನೀಡಲಾಗಿದೆ.

ಎಚ್.ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡುವ ವೇಳೆ ಯಡಿಯೂರಪ್ಪ ಭಾಷಣ ಮಾಡುತ್ತಿದ್ದರು. ಭಾಷಣದ ಕೊನೆಯಲ್ಲಿ ಕೋಪಗೊಂಡ ಅವರು ರೈತರ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಕರೆ ಕೊಟ್ಟಿದ್ದರು. ಆದರೆ ಇಂದು ರೈತರೇ ಪ್ರತಿಭಟನೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಈ ಸಂಬಂಧ ಯಡಿಯೂರಪ್ಪ ಬಂದ್ ಗೆ ಕರೆ ಕೊಟ್ಟಿರುವುದು ಅಕ್ರಮ ಎಂದು ವಕೀಲ ಸೂರ್ಯ ಮುಕುಂದ್ ರಾಜ್ ಅವರು ಡಿಜಿಪಿಗೆ ದೂರು ನೀಡಿದ್ದಾರೆ.

ಈ ಹಿಂದೆ ಬಂದ್ ಮಾಡಿದಾಗ ಸುಪ್ರೀಂ ಕೋರ್ಟ್, ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಬಂದ್ ಅಕ್ರಮ ಎಂದು ತೀರ್ಪು ಕೊಟ್ಟಿತ್ತು. ಈಗ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿ ಯಡಿಯೂರಪ್ಪ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದಾರೆ. ಬಂದ್ ಮೂಲಕ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಯಡಿಯೂರಪ್ಪ ಪ್ಲಾನ್ ಮಾಡಿದ್ದಾರೆ ಎಂದು ದೂರನಲ್ಲಿ ಉಲ್ಲೇಖಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English