- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

4 ವರ್ಷ ಪೂರೈಸಿದ ಕೇಂದ್ರ ಸರ್ಕಾರದ ವಿರುದ್ಧ ‘ಕೈ’ ಪ್ರತಿಭಟನೆ..!

centralgovt [1]ಬೆಂಗಳೂರು: ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ 4 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಕಮಿಟಿಯಿಂದ ವಿನೂತನ ಪ್ರತಿಭಟನೆ ನಡೆಯಿತು.

ನಗರದ ಮೌರ್ಯ ಸರ್ಕಲ್‌‌ನಲ್ಲಿ ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು, ಪಕೋಡ ಮಾರುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟಾಚಾರ ಹಾಗೂ ಜನರ ಹಣ ಲೂಟಿ ಮಾಡಿದ ಭ್ರಷ್ಟರಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.

ಮುಖಕ್ಕೆ ಮೋದಿ ಮುಖವಾಡ ಧರಿಸಿದ ಪ್ರತಿಭಟನಾಕಾರರು, ಕಪ್ಪು ಹಣ ದೇಶಕ್ಕೆ ವಾಪಸ್‌‌ ತರುತ್ತೇವೆ ಅಂತ ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ನೋಟ್ ಬ್ಯಾನ್ ದೇಶದ ಜನರಿಗೆ ಆದ ನಷ್ಟದ ಬಗ್ಗೆ ಪ್ರಧಾನಿ ಸ್ಪಷ್ಟವಾಗಿ ನಾಡಿನ ಜನರಿಗೆ ಉತ್ತರ ನೀಡಿಲ್ಲ. ವಿದೇಶಕ್ಕೆ ಪಲಾಯನ ಮಾಡಿರೋ ಲಲಿತ್ ಮೋದಿ, ನೀರವ್ ಮೋದಿ ಮತ್ತು ವಿಜಯ್ ಮಲ್ಯರನ್ನ ಕೇಂದ್ರ ಸರ್ಕಾರ ಯಾಕೆ ಬಂಧಿಸಲಿಲ್ಲ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಇತಿಹಾಸದಲ್ಲೇ ಪೆಟ್ರೋಲ್ ಬೆಲೆ ಗಗನಕ್ಕೆ ಏರುವಂತೆ ಪ್ರಧಾನಿ ಮಾಡಿದ್ದಾರೆ ಎಂದು ಆರೋಪಿಸಿದರು.