ಕೊಪ್ಪಳ ಜಿಲ್ಲೆಯಲ್ಲೂ ಅಬ್ಬರಿಸಿದ ಮಳೆರಾಯ… ಹಲವೆಡೆ ಅವಾಂತರ

10:06 AM, Wednesday, May 30th, 2018
Share
1 Star2 Stars3 Stars4 Stars5 Stars
(No Ratings Yet)
Loading...

kopal-dstಕೊಪ್ಪಳ: ಜಿಲ್ಲೆಯಾದ್ಯಂತ ಮಳೆರಾಯ ನಿನ್ನೆ ರಾತ್ರಿ ಅಬ್ಬರಿಸಿದ್ದು, ವ್ಯಾಪಕ ಮಳೆಗೆ ಜಿಲ್ಲೆಯ ಹಲವೆಡೆ ಅವಾಂತರ ಸೃಷ್ಟಿಯಾಗಿದೆ.

ಸುಮಾರು ಗಂಟೆಗಳ ಕಾಲ ಸುರಿದ ಮಳೆಗೆ ತಗ್ಗುಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಜನಜೀವನ ಒಂದಿಷ್ಟು ಅಸ್ತವ್ಯಸ್ಥಗೊಂಡಿದೆ. ಇನ್ನು ಕೆಲವೆಡೆ ಹಳ್ಳಗಳಿಗೆ ನಿರ್ಮಿಸಲಾಗಿರುವ ತಾತ್ಕಾಲಿಕ ಸೇತುವೆಗಳು ಒಡೆದು ಹೋಗಿದ್ದು, ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಕುಕನೂರು ತಾಲೂಕಿನ ಬಿನ್ನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾತ್ಕಾಲಿಕ ಸೇತುವೆ ಕೊಚ್ಚಿಕೊಂಡು ಹೋಗಿದ್ದು, ಸುಮಾರು 18 ಕಿಮೀ ಹೆಚ್ಚು ದೂರ ಸುತ್ತಿಕೊಂಡು ಬೇರೆ ಬೇರೆ ಊರುಗಳಿಗೆ ತೆರಳಬೇಕಿದೆ. ಶಿರೂರು ಗ್ರಾಮದ ಹಳ್ಳ ತುಂಬಿ ಹರಿಯುತ್ತಿದ್ದು ರಸ್ತೆ ಸಂಚಾರ ಸಂಪರ್ಕ ಕಡಿತಗೊಂಡಿದೆ.

ಇದಲ್ಲದೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನವೀನಚಂದ್ರ ನಾಯಕ ಎಂಬುವವರಿಗೆ ಸೇರಿದ ಎರಡು ಆಕಳುಗಳು ಸಿಡಿಲು ಬಡಿದು ಅಸುನೀಗಿವೆ ಎಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English