ಮಧ್ಯಾಹ್ನದ ಹೊತ್ತಿಗೆ ರೈತರಿಗೆ ಗುಡ್ ನ್ಯೂಸ್: ಜಿ.ಟಿ. ದೇವೇಗೌಡ

11:46 AM, Wednesday, May 30th, 2018
Share
1 Star2 Stars3 Stars4 Stars5 Stars
(No Ratings Yet)
Loading...

g-t-devegowdaಬೆಂಗಳೂರು: ರೈತರ ಸಾಲಮನ್ನ ಕುರಿತು ಇಂದು ಸಿಎಂ ನಿರ್ಧಾರ ಪ್ರಕಟಿಸಲಿರುವ ಹಿನ್ನೆಲೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಭೇಟಿ ಮಾಡಿ ಚರ್ಚಿಸಿದರು.

ಜೆಪಿ ನಗರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ್ದ ಅವರು, ಕೆಲ ಸಮಯ ಸಿಎಂ ಹೆಚ್‌ಡಿಕೆ ಜೊತೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಮುಗಿದ ನಂತರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಅವರನ್ನು ಭೇಟಿ ಮಾಡಿದ್ದೇನೆ ಎಂದರು. ಅಲ್ಲದೆ, ಮಧ್ಯಾಹ್ನದ ಹೊತ್ತಿಗೆ ರಾಜ್ಯದ ರೈತರಿಗೆ ಗುಡ್ ನ್ಯೂಸ್ ಸಿಗುವ ಸಾದ್ಯತೆ ಇದೆ. ಆ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನನಗೆ ಸ್ಪಷ್ಟ ಬಹುಮತ ಕೊಡಿ, ನಾನು ರೈತರ ಸಾಲಮನ್ನಾ ಮಾಡುತ್ತೇನೆ ಎಂದು ರಾಜ್ಯದ ಜನರಲ್ಲಿ ಕುಮಾರಸ್ವಾಮಿಯವರು ಮನವಿ ಮಾಡಿದ್ದರು. ಆದರೆ ಸ್ಪಷ್ಟ ಬಹುಮತ ಸಿಗದ ಕಾರಣ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಒಂದು ವಾರ ಕಾಲಾವಕಾಶ ಕೋರಿದರು. ಇಂದು ಎಲ್ಲಾ ಜಿಲ್ಲೆಯ ರೈತ ಮುಖಂಡರು ಹಾಗೂ ಪ್ರತಿಪಕ್ಷ ನಾಯಕರ ಜೊತೆ ಸಭೆ ಇದೆ. ಸಭೆಯಲ್ಲಿ ರೈತರ ಸಾಲ ಮನ್ನಾ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ ಎಂದು ಜಿಟಿಡಿ ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English