- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಲ್ಲಡ್ಕ ಶಾಲೆಗೆ ಬಿಸಿಯೂಟ ಪೂರೈಸಿದ ರಾಜ್ಯ ಸರ್ಕಾರ..!

kalladka [1]ಮಂಗಳೂರು: ಕೊಲ್ಲೂರು ದೇವಾಲಯದಿಂದ ಸಿಗುತ್ತಿದ್ದ ಆರ್ಥಿಕ ನೆರವನ್ನು ನಿಲ್ಲಿಸಿದ ನಂತರ ಭಾರಿ ವಿವಾದಕ್ಕೀಡಾದ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರ ಮತ್ತು ಪುಣಚ ಅನುದಾನಿತ ಪ್ರೌಢ ಶಾಲೆ ಬಳಿಕ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬಿಸಿಯೂಟಕ್ಕಾಗಿ ಸರ್ಕಾರದಿಂದ ಅಕ್ಕಿ ಪೂರೈಕೆ ಮಾಡಲಾಗಿದೆ.

ಸರ್ಕಾರದ ಬಿಸಿಯೂಟ ವ್ಯವಸ್ಥೆಯಿದ್ದರೂ ಕಲ್ಲಡ್ಕ ಮತ್ತು ಪುಣಚ ಶಾಲೆಗೆ ಕೊಲ್ಲೂರು ದೇವಾಲಯದಿಂದ ಬಿಸಿಯೂಟಕ್ಕೆ ಆರ್ಥಿಕ ನೆರವನ್ನು ನೀಡಲಾಗುತ್ತಿತ್ತು. ಆದರೆ ಇದನ್ನು ಸರ್ಕಾರ ರದ್ದು ಪಡಿಸಿತ್ತು.

ಈ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಈ ಸಂಸ್ಥೆಗಳಿಂದ ಮಧ್ಯಾಹ್ನದ ಬಿಸಿಯೂಟಕ್ಕಾಗಿ ಅರ್ಜಿ ಸಲ್ಲಿಸಲಾಗಿದ್ದು ಅದನ್ನು ಪುರಸ್ಕರಿಸಿ ಅಕ್ಷರ ದಾಸೋಹದ ಅಧಿಕಾರಿಗಳು ಅಕ್ಕಿ ಪೂರೈಕೆ ಮಾಡಿದ್ದಾರೆ.