ಸಿನಿಮಾಗಿಂತ ನೀರು ಮುಖ್ಯ, ನಾನು ಜನರ ಪ್ರತಿನಿಧಿಯಾಗಿ ಬಂದಿದ್ದೇನೆ: ಕಮಲ್ ಹಾಸನ್

6:03 PM, Monday, June 4th, 2018
Share
1 Star2 Stars3 Stars4 Stars5 Stars
(No Ratings Yet)
Loading...

kamal-kumaarಬೆಂಗಳೂರು: ಖ್ಯಾತ ನಟ, ರಾಜಕಾರಣಿ ಕಮಲ್ ಹಾಸನ್ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ ಕಮಲ್ ಹಾಸನ್ ಹಾಗೂ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ ಬಳಿಕ ಜಂಟಿಯಾಗಿ ಇಬ್ಬರೂ ಮಾತನಾಡಿದರು.

ಸಿನಿಮಾಗಿಂತ ನೀರು ಮುಖ್ಯ: ಕಮಲ್ ಹಾಸನ್ ಮಾತನಾಡಿ, ನಾವು ಎರಡೂ ರಾಜ್ಯಗಳು ಸಹೋದರತ್ವದಿಂದ ಬಾಳಬೇಕಾಗಿದೆ. ನಾನು ಸರ್ಕಾರದ ಪ್ರತಿನಿಧಿಯಾಗಿ ಕರ್ನಾಟಕಕ್ಕೆ ಬಂದಿಲ್ಲ, ಜನರ ಪ್ರತಿನಿಧಿಯಾಗಿ ಬಂದಿದ್ದೇನೆ. ಅಷ್ಟೇ ಅಲ್ಲ ಕುರುವೈ ಬೆಳೆಗೆ ನೀರು ಕೇಳಲು ಬಂದಿದ್ದೇನೆ. ನನಗೆ ಈ ಸಂದರ್ಭದಲ್ಲಿ ಸಿನಿಮಾಗಿಂತ ಕಾವೇರಿ ವಿಷಯವೇ ತುಂಬಾ ಮುಖ್ಯ ಎಂದು ಹೇಳಿದರು.

ಕಾವೇರಿ ನಾವು ಹುಟ್ಟುವ ಮೊದಲೇ ಇತ್ತು. ಆದರೆ ನಾವೀಗ ಕಚ್ಚಾಡಿಕೊಳ್ಳುತ್ತಿದ್ದೇವೆ. ಈ ವಿಚಾರವನ್ನು ಎರಡೂ ರಾಜ್ಯಗಳ ರೈತರೇ ಬಗೆಹರಿಸಿಕೊಳ್ಳಬೇಕು. ನಮ್ಮ ಕೊನೆಯ ಆಯ್ಕೆ ಕೋರ್ಟ್ ಆಗಿರಬೇಕಿತ್ತು. ಆದರೆ ಈಗಾಗಲೇ ಪ್ರಕರಣ ಕೋರ್ಟ್‌ನಲ್ಲಿದೆ. ತಮಿಳುನಾಡು ಜನತೆಗಾಗಿ ಕರ್ನಾಟಕ-ತಮಿಳುನಾಡು ಸರ್ಕಾರಗಳ ನಡುವೆ ಮಧ್ಯಸ್ಥಿಕೆಗೆ ನಾನು ಸಿದ್ದ. ನಾವು ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕಾಗಿದೆ ಎಂದರು.

ರಜನಿಕಾಂತ್ ನಟಿಸಿರುವ ಕಾಲ ಚಿತ್ರ ವಿವಾದದ ಬಗ್ಗೆ ನಾವು ಯಾವುದೇ ಚರ್ಚೆ ಮಾಡಿಲ್ಲ. ಅದಕ್ಕಾಗಿ ವಾಣಿಜ್ಯ ಮಂಡಳಿ ಇದೆ. ಅವರು ನೋಡಿಕೊಳ್ಳುತ್ತಾರೆ. ನಾನು ತಮಿಳುನಾಡು ಜನತೆಯ ಪರವಾಗಿ ಬಂದಿದ್ದೇನೆ ಅಷ್ಟೇ ಎಂದು ಹೇಳಿದರು.

ಸಿಎಂ ಕುಮಾರಸ್ವಾಮಿ ಮಾತನಾಡಿ, ಕರ್ನಾಟಕ ಮತ್ತು ತಮಿಳುನಾಡು ನಡುವೆ ಸೌಹಾರ್ದತೆ ಇರಬೇಕು. ಎರಡೂ ರಾಜ್ಯಗಳು ಸಹೋದರ ಭಾವನೆಯಲ್ಲಿರಬೇಕು. ಈ ನಿಟ್ಟಿನಲ್ಲಿಯೇ ನಮ್ಮಿಬ್ಬರ ಚರ್ಚೆ ನಡೆದಿದೆ. ನಮ್ಮ ರೈತರು, ತಮಿಳುನಾಡಿನ ರೈತರೂ ಬದುಕಬೇಕು. ಸೌಹಾರ್ದಯುತವಾಗಿ ಈ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English