[1]ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ್ ಇಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಶುಭ ಕೋರಿದರು.
ಜೆ.ಪಿ. ನಗರ ಸಿಎಂ ನಿವಾಸದಲ್ಲಿ ಇಂದು ಭೇಟಿ ಮಾಡಿದ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ್ ಕೆಲಹೊತ್ತು ಸಿಎಂ ಜೊತೆ ಚರ್ಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಶುಭಕೋರಲು ಬಂದಿರುವುದಾಗಿ ಹೇಳಿದರು. ಇದೇ ವೇಳೆ ಡಾ. ವಿಷ್ಣುವರ್ಧನ್ ಸ್ಮಾರಕ ಕುರಿತು ಒಂದು ವಾರದಲ್ಲಿ ಸಭೆ ಕರೆಯುವುದಾಗಿ ಕುಮಾರಸ್ವಾಮಿಯವರು ತಿಳಿಸಿದ್ದಾರೆ ಎಂದರು.
ಆ ಸಭೆಯಲ್ಲಿ ಸ್ಮಾರಕದ ಬಗ್ಗೆ ಚರ್ಚೆ ಮಾಡೋಣವೆಂದು ಅವರು ಹೇಳಿದ್ದಾರೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದರು.