ಜಯನಗರ ಕ್ಷೇತ್ರದ ಚುನಾವಣೆ: ‘ಕೈ’ ಅಭ್ಯರ್ಥಿಯನ್ನ ಬೆಂಬಲಿಸಲು ದೇವೇಗೌಡರ ಸೂಚನೆ

6:22 PM, Tuesday, June 5th, 2018
Share
1 Star2 Stars3 Stars4 Stars5 Stars
(No Ratings Yet)
Loading...

devegowdaಬೆಂಗಳೂರು: ಬಿಜೆಪಿ ಶಾಸಕ ಬಿ.ಎನ್. ವಿಜಯಕುಮಾರ್ ಅವರ ನಿಧನ ಹಿನ್ನೆಲೆಯಲ್ಲಿ ಮುಂದೂಡಿದ್ದ ಜಯನಗರ ವಿಧಾನಸಭೆ ಚುನಾವಣೆ ಜೂನ್ 11 ರಂದು ನಡೆಯಲಿದ್ದು, ಮಹತ್ವದ ಬೆಳವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಅವರು ಕಣದಿಂದ ಹಿಂದೆ ಸರಿದಿದ್ದಾರೆ.

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಸೂಚನೆ ಮೇರೆಗೆ ಕಣದಿಂದ ಹಿಂದೆ ಸರಿದಿರುವ ಕಾಳೇಗೌಡರಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವಂತೆ ಗೌಡರು ಸೂಚನೆ ನೀಡಿದ್ದಾರೆ.

ಅದೇ ರೀತಿ ಈ ಚುನಾವಣೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೂ ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ದೇವೇಗೌಡ ಸೂಚನೆ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English