- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸಮ್ಮಿಶ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ.ಖಾದರ್

u-t-kader-minister [1]ಮಂಗಳೂರು: ಸಮ್ಮಿಶ್ರ ಸರಕಾರದ ನೂತನ ಸಚಿವರಾಗಿ ಯು.ಟಿ.ಖಾದರ್ ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು.

ಎಚ್.ಡಿ.ರೇವಣ್ಣ, ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶೆಂಪೂರ್, ಡಿ.ಕೆ.ಶಿವಕುಮಾರ್, ಜಿ.ಟಿ.ದೇವೇಗೌಡ, ಕೆ.ಜೆ.ಜಾರ್ಜ್ , ಡಿ.ಸಿ.ತಮ್ಮಣ್ಣ, ಕೃಷ್ಣ ಭೈರೇಗೌಡ, ಎಂ.ಸಿ. ಮನಗುಳಿ, ಎನ್.ಎಚ್.ಶಿವಶಂಕರ ರೆಡ್ಡಿ, ಎಸ್.ಆರ್.ಶ್ರೀನಿವಾಸ್, ರಮೇಶ್ ಜಾರಕಿಹೊಳಿ, ವೆಂಕಟರಾವ್ ನಾಡಗೌಡ, ಪ್ರಿಯಾಂಕ್ ಖರ್ಗೆ, ಸಾ.ರಾ.ಮಹೇಶ್, ಝಮೀರ್ ಅಹ್ಮದ್ ಖಾನ್ ಹಾಗು ಎನ್. ಮಹೇಶ್ ಈಗಾಗಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ.