ಹೆಲಿಕಾಪ್ಟರ್ ಬಾಡಿಗೆ ಹಣ ವಿಚಾರ: ಬಿಎಸ್‌ವೈಗೆ ಹೆಚ್‌ಡಿಕೆ ತಿರುಗೇಟು

3:27 PM, Thursday, June 7th, 2018
Share
1 Star2 Stars3 Stars4 Stars5 Stars
(No Ratings Yet)
Loading...

yedyurappaಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ವಿಧಾನಸಭೆ ಪ್ರತಿಪಕ್ಷ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಂದ ಹೆಲಿಕಾಪ್ಟರ್ ಬಾಡಿಗೆ ಹಣ ಕಟ್ಟಿಸಿಕೊಳ್ಳುವಷ್ಟು ದರಿದ್ರ ರಾಜ್ಯ ಸರ್ಕಾರಕ್ಕೆ ಬಂದಿಲ್ಲವೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಂದ ನಮಗೆ ಯಾವುದೇ ಪತ್ರ ಬಂದಿಲ್ಲ. ಸರ್ಕಾರದ ಹಣ ದುಂದು ವೆಚ್ಚ ಆಗಬಾರದು ಎಂದು ಹೆಲಿಕಾಪ್ಟರ್ ಪ್ರಯಾಣದ ವೆಚ್ಚವನ್ನು ಉಲ್ಲೇಖಿಸಲಾಗಿತ್ತು. ತಾವು ದೆಹಲಿಗೆ ವಿಶೇಷ ವಿಮಾನದಲ್ಲಿ ಹೋಗಿ ಬಂದಿದ್ದರೆ 40 ಲಕ್ಷ ರೂ. ಖರ್ಚಾಗುತ್ತಿತ್ತು. ಆದರೆ, ಸಾಮಾನ್ಯ ವಿಮಾನದಲ್ಲಿ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬಂದಿದ್ದು, ಆ ವಿಚಾರವನ್ನಷ್ಟೇ ಪ್ರಸ್ತಾಪ ಮಾಡಲಾಗಿತ್ತು ಎಂದು ಹೆಚ್‌ಡಿಕೆ ತಿಳಿಸಿದರು.

ಸರ್ಕಾರದ ಹಣವನ್ನು ದುಂದು ವೆಚ್ಚ ಮಾಡುವುದು ಬೇಡವೆಂದು ಹೇಳಿದ್ದೇನೆ ಅಷ್ಟೆ. ದುಂದು ವೆಚ್ಚ ಕಡಿಮೆ ಮಾಡುವ ಬಗ್ಗೆ ಹೇಳಿಕೆ ನೀಡಲಾಗಿತ್ತು. ಯಡಿಯೂರಪ್ಪ ಅವರನ್ನು ಟೀಕಿಸುವ ಉದ್ದೇಶದಿಂದಲ್ಲ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English