- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರ ಎಲ್ಲವೂ ಬಿಜೆಪಿ ತೆಕ್ಕೆಗೆ: ಡಿ.ವಿ.ಸದಾನಂದ ಗೌಡ

sadananda-gowda [1]ಪುತ್ತೂರು: ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರ ಎಲ್ಲವೂ ಬಿಜೆಪಿ ತೆಕ್ಕೆಗೆ ಎಂದು ಡಿ.ವಿ.ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಸದಾನಂದ ಗೌಡ ಅವರು ಶಿಕ್ಷಕರು ,ಪದವೀಧರರು ಹಿಂದಿನಿಂದಲೂ ಬಿಜೆಪಿ ಬೆಂಬಲಿಸಿದವರು.ವಿಧಾನಸಭೆಯಲ್ಲಿ ಶಾಸಕರಿಲ್ಲದ ಕಾಲದಲ್ಲೂ ವಿಧಾನಪರಿಷತ್ ಗೆ ಶಾಸಕರನ್ನು ಕಳುಹಿಸಿದ ಇತಿಹಾಸ ಬಿಜೆಪಿಯದ್ದು.ಇತ್ತೀಚಿನ ದಿನಗಳಲ್ಲಿ ಬಿಜೆಪಿ‌ ಬಗ್ಗೆ ಒಲವು ಹೆಚ್ಚಾಗಿದೆ ಎಂದಿದ್ದಾರೆ.

ರಾಜ್ಯದ ಎಲ್ಲಾ ಸ್ಥಾನಗಳನ್ನೂ ನೂರಕ್ಕೆ ನೂರು ಬಿಜೆಪಿ ಪಡೆಯಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.