[1]ಮಂಗಳೂರು: ಕರಾವಳಿ ಮಂಗಳೂರಿನಲ್ಲಿ ಎರಡು ದಿನಗಳಿಂದ ಆರಂಭವಾದ ಮಳೆಯ ಆರ್ಭಟ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಗಾಳಿ ಮಳೆಯ ರಭಸಕ್ಕೆ ಹಲವೆಡೆ ಮರಗಳು ನೆಲಕ್ಕುರುಳಿದೆ.
[2]ಭಾರಿ ಮಳೆಗೆ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಶಾಲೆಗೆ ಇಂದು ಕೂಡ ರಜೆ ಘೋಷಿಸಲಾಗಿದೆ. ಇತ್ತ ಭಾರಿ ಮಳೆಗೆ ಹಳೆ ಕಟ್ಟಡ ಹಾಗೂ ಮರಗಳು ನೆಲಕ್ಕುರುಳಿದೆ.
[3]ಮಂಗಳೂರಿನ ಕಾರ್ ಸ್ಟ್ರೀಟ್ನಲ್ಲಿ ಹಳೆಯ ಕಟ್ಟಡವೊಂದರ ಮೇಲಿನ ಅಂತಸ್ತು ಕುಸಿದಿದ್ದು, ಕಟ್ಟಡದ ಹೊರಗೆ ನಿಲ್ಲಿಸಲಾಗಿದ್ದ ಎರಡು ಬೈಕ್ ಗಳಿಗೆ ಹಾನಿಯಾಗಿದೆ. ಅಲ್ಲದೆ ಜಿಲ್ಲೆಯ ಹಲವೆಡೆ ಮರಗಳು ರಸ್ತೆಗೆ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.