ಬೇಲ್ ಮೇಲೆ ಜೈಲಿನಿಂದ ಬಂದ ದಿನವೇ ಯುವಕನ ಮೇಲೆ ಅಟ್ಯಾಕ್‌… ಕಲ್ಲಡ್ಕದಲ್ಲಿ ಘಟನೆ

12:14 PM, Tuesday, June 12th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

assualtಮಂಗಳೂರು: ಯುವಕನೋರ್ವನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆದಿದೆ.

ಚೇತನ್ ಮೆಲ್ಕಾರ್ ಹಲ್ಲೆಗೊಳಗಾದ ಯುವಕ. ಕಿರಣ್ ಮೆಲ್ಕಾರ್, ಯೋಗೇಶ್, ಮೋಹನ್, ಕೀರ್ತನ್, ಲೋಕೇಶ್, ಪ್ರಕಾಶ್, ವಿದ್ಯಾಧರ್ ಎಂಬವರ ತಂಡ ಹಲ್ಲೆ ನಡೆಸಿದೆ ಎನ್ನಲಾಗಿದೆ.

assualt-2ಚೇತನ್ ಇಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಹಳೆಯ ದ್ವೇಷದಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳು ಚೇತನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English