[1]ಮಂಗಳೂರು: ಯುವಕನೋರ್ವನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆದಿದೆ.
ಚೇತನ್ ಮೆಲ್ಕಾರ್ ಹಲ್ಲೆಗೊಳಗಾದ ಯುವಕ. ಕಿರಣ್ ಮೆಲ್ಕಾರ್, ಯೋಗೇಶ್, ಮೋಹನ್, ಕೀರ್ತನ್, ಲೋಕೇಶ್, ಪ್ರಕಾಶ್, ವಿದ್ಯಾಧರ್ ಎಂಬವರ ತಂಡ ಹಲ್ಲೆ ನಡೆಸಿದೆ ಎನ್ನಲಾಗಿದೆ.
[2]ಚೇತನ್ ಇಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಹಳೆಯ ದ್ವೇಷದಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳು ಚೇತನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.