ದಲಿತರಿಂದ ಮಲ ತೆಗೆಸುವ ಪದ್ಧತಿಯನ್ನು ನಿಷೇಧಿಸಬೇಕು :ದ.ಸಂ.ಸ

10:19 AM, Thursday, November 17th, 2011
Share
1 Star2 Stars3 Stars4 Stars5 Stars
(5 rating, 7 votes)
Loading...

Dalit Protest

ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ| ಕೃಷ್ಣಪ್ಪ ಸ್ಥಾಪಿತ) ಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯದಲ್ಲಿ ಮಾನವ ಕೈಗಳಿಂದ ಮಲ ತೆಗೆಸುವ ಪದ್ಧತಿಯನ್ನು ಸಂಪೂರ್ಣ ನಿಷೇಧಿಸಬೇಕು ಹಾಗೂ ಐ.ಪಿ.ಡಿ. ಸಾಲಪ್ಪ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಿತು.

ಇತ್ತೀಚೆಗೆ ಮಂಗಳೂರು ತಾಲೂಕಿನ ಕಿನ್ನಿಗೋಳಿಯಲ್ಲಿ ಕೃಷ್ಣ ಕೊರಗ ಮತ್ತು ಕೋಲಾರ ಜಿಲ್ಲೆಯ ಕೆ.ಜಿ.ಎಫ್‌. ನಲ್ಲಿ ಓರ್ವ ಪೌರ ಕಾರ್ಮಿಕ ಶೌಚಾಲಯ ಗುಂಡಿಯಲ್ಲಿ ಸಾವನ್ನಪ್ಪಿರುವುದರ ಪ್ರತಿಭಟನಾರ್ಥ ಈ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

 ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಎಂ.ದೇವದಾಸ್ ಮಾತನಾಡಿ  ಕೋಲಾರ ಮತ್ತು ಮಂಗಳೂರಿನ ಕಿನ್ನಿಗೋಳಿಯಲ್ಲಿ ಇಬ್ಬರು ವ್ಯಕ್ತಿಗಳು ಈ ರೀತಿ ಸಾವನ್ನಪ್ಪಲು ಸರ್ಕಾರದ  ಅವ್ಯವಸ್ಥೆಯೇ ಕಾರಣ ಎಂದು ಆರೋಪಿಸಿದರು. ಈ ಕುರಿತಂತೆ ನಗರಾಭಿವೃದ್ಧಿ ಸಚಿವ ಸುರೇಶ್‌ ಕುಮಾರ್‌ ಮತ್ತು ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರಗಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದ.ಸಂ.ಸ. ರಾಜ್ಯ ಸಂಘಟನಾ ಸಂಚಾಲಕ ಎಂ. ದೇವದಾಸ್‌ ಮತ್ತು ವೆಂಕಟಗಿರಿಯಯ್ಯ ಮಂಡ್ಯ, ರಾಜ್ಯ ಸಮಿತಿ ಸಂಚಾಲಕ ಜೆ. ಶ್ರೀನಿವಾಸುಲು, ಉಡುಪಿ – ಮಂಗಳೂರು ವಿಭಾಗೀಯ ಸಂಚಾಲಕ ಶೇಖರ್‌ ಹೆಜಮಾಡಿ, ದ.ಕ. ಜಿಲ್ಲಾ ಸಂಚಾಲಕ ಕೃಷ್ಣಾನಂದ ಡಿ., ಸಂಘಟನಾ ಸಂಚಾಲಕ ಶೇಖರ್‌ ಚಿಲಿಂಬಿ ಅವರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English