ವಿಧಾನಪರಿಷತ್ ಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕ್ಯಾ. ಗಣೇಶ್ ಕಾರ್ಣಿಕ್ ಗೆ ಸೋಲು..!

11:19 AM, Wednesday, June 13th, 2018
Share
1 Star2 Stars3 Stars4 Stars5 Stars
(No Ratings Yet)
Loading...

ganesh-karnikಮಂಗಳೂರು: ನೈಋತ್ಯ ಶಿಕ್ಷಕ ಕ್ಷೇತ್ರದಿಂದ ವಿಧಾನಪರಿಷತ್ ಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕ್ಯಾ. ಗಣೇಶ್ ಕಾರ್ಣಿಕ್ ಸೋಲನ್ನನುಭವಿಸಿದ್ದಾರೆ. ನೈಋತ್ಯ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಜೆ ಡಿಎಸ್ ಪಕ್ಷದ ಅಭ್ಯರ್ಥಿ ಭೋಜೆ ಗೌಡ ಅವರು ಜಯಗಳಿಸಿದ್ದು ಕ್ಯಾ. ಗಣೇಶ್ ಕಾರ್ಣಿಕ್ ಅವರು ಸೋಲನ್ನನುಭವಿಸಿದ್ದಾರೆ.

ನೈಋತ್ಯ ಶಿಕಷಕ ಕ್ಷೇತ್ರ ಚುನಾವಣೆಗೆ ಈ ಬಾರಿ 12 ಮಂದಿ ಸ್ಪರ್ಧಿಸಿದ್ದು ತಮ್ಮನ್ನು ಹೊರತುಪಡಿಸಿ , ಸ್ಪರ್ಧಿಸಿದ ಎಲ್ಲ 11 ಅಭ್ಯರ್ಥಿಗಳ ನಿರ್ಗಮನದ ನಂತರವೂ ಜೆ ಡಿಎಸ್ ನ ಭೋಜೆಗೌಡ ಅವರು ಗೆಲುವಿಗೆ ನಿಗದಿಯಾಗಿದ್ದ 7846 ತಗಳ ಕೋಟವನ್ನು ತಲುಪಲಾಗದೆ 7310 ಮತಗಳನ್ನು ಮಾತ್ರ ಪಡೆದರು. ನಿಯಮದಂತೆ ಅತಿಹೆಚ್ಚು ಮತ ಪಡೆದ ಅಭ್ಯರ್ಥಿಯನ್ನು ಚುನಾವಣಾ ಆಯೋಗ ವಿಜಯಿ ಅಭ್ಯರ್ಥಿ ಎಂದು ಘೋಷಿಸಿದೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English