ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆಯಿಂದ ಜಯನಗರದಲ್ಲಿ ಬಿಜೆಪಿಗೆ ಹಿನ್ನಡೆ: ಬಿ.ಎಸ್.ಯಡಿಯೂರಪ್ಪ

1:29 PM, Wednesday, June 13th, 2018
Share
1 Star2 Stars3 Stars4 Stars5 Stars
(No Ratings Yet)
Loading...

yedyurappaಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ಕಾರಣ ನಮ್ಮ ಅಭ್ಯರ್ಥಿ ಅಲ್ಪ ಮತಗಳಿಂದ ಪರಾಭವಗೊಳ್ಳುವಂತಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಪ್ರಹ್ಲಾದ್ ಬಾಬು ಕಡಿಮೆ ಅಂತರದಲ್ಲಿ ಸೋತಿದ್ದಾರೆ. ನಮ್ಮ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ರು. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೇಲೆ ಜಯನಗರ ಮತದಾರರು ವಿಶ್ವಾಸ ಇಟ್ಟು ಹೆಚ್ಚು ಮತ ಕೊಟ್ಟಿದ್ದಾರೆ. ಅವರಿಗೆ ಕೃತಜ್ಞತೆ. ಜೆಡಿಎಸ್ ಅಭ್ಯರ್ಥಿ ಕಡೆ ಗಳಿಗೆಯಲ್ಲಿ ಹೊಂದಾಣಿಕೆ ಮಾಡಿಕೊಂಡರು. ಇದು ನಮಗೆ ಸ್ವಲ್ಪ ಮಟ್ಟಿನ ಹಿನ್ನಡೆ ಆಯ್ತು. ಪ್ರಹ್ಲಾದ್ ಬಾಬು ಹೊಸ ಮುಖ, ಜನರಿಗೆ ಪರಿಚಯ ಇರಲಿಲ್ಲ. ಆದರೂ ಹೆಚ್ಚು ಮತ ಕೊಟ್ಟಿದ್ದಾರೆ. ಎಲ್ಲರ ಶ್ರಮದಿಂದ ಹೆಚ್ಚು ಮತ ಸಿಕ್ಕಿದೆ ಎಂದರು.

ಪದವೀಧರ, ಶಿಕ್ಷಕರ ಕ್ಷೇತ್ರಗಳಲ್ಲಿ ಮೂರರಲ್ಲಿ ನಾವು ಜಯ ಗಳಿಸಿದ್ದೇವೆ ಪದವೀಧರ, ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English