- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಲ್ಲಿ ರಾಜ್ಯ ವಿಳಂಬ ನೀತಿ ಅನುಸರಿಸುತ್ತಿದೆ: ರಾಜ್ಯ ರೈತ ಸಂಘ

formers-m1 [1]ಮಂಗಳೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಲ್ಲಿ ರಾಜ್ಯ ವಿಳಂಬ ನೀತಿ ಅನುಸರಿಸುತ್ತಿದೆ. ಶೀಘ್ರವೇ ಸಾಲ ಮನ್ನಾಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿತು.

formers-m2 [2]ಧರಣಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರವಿಕಿರಣ್ ಪುಣಚ, ಜಿಲ್ಲಾ ಕಾರ್ಯದರ್ಶಿ ರೋನಿ ಮೆಂಡೋನ್ಸಾ, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ರಾಜೇಂದ್ರ ಕುಮಾರ್, ರೈತ ಸಂಘದ ಪದಾಧಿಕಾರಿಗಳಾದ ತಾರಾನಾಥ ಗೌಡ, ರೂಪೇಶ್ ರೈ ಅಲಿಮಾರ್, ಇಬ್ರಾಹೀಂ ಖಲೀಲ್, ನಾರಾಯಣ ರಾವ್, ಪ್ರೇಮನಾಥ ಶೆಟ್ಟಿ ಸತ್ಯ ಶಂಕರ ಭಟ್, ದಿವಾಕರ ಪೈ ಮೊದಲಾದವರು ಉಪಸ್ಥಿತರಿದ್ದರು.