ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮತ್ತೆ ವರುಣನ ಆಗಮನವಾಗಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಮಲೆನಾಡಿನ ಹಲವೆಡೆ ಮಳೆ ಸುರಿಯುತ್ತಿದೆ.
ಚಾರ್ಮಾಡಿ ಘಾಟಿಯಲ್ಲಿಯೂ ಹೆಚ್ಚು ಮಳೆಯಾಗುತ್ತಿದೆ. ಅಷ್ಟೇ ಅಲ್ಲದೇ ರಸ್ತೆ ಕಾಣದಂತೆ ಮಂಜು ಆವರಿಸಿದೆ. ಮಂಜಿನ ಜೊತೆಯೇ ಮಳೆ ಸುರಿಯುತ್ತಿರುವುದರಿಂದ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರಿಗೆ ಕೊಂಚ ತೊಂದರೆಯುಂಟಾಗಿದೆ.
ಇನ್ನು ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು, ಮೂಡಿಗೆರೆ, ಚಾರ್ಮಾಡಿ ಘಾಟ್ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ.
Click this button or press Ctrl+G to toggle between Kannada and English