ತೇರದಾಳದಲ್ಲಿ ಯೋಗ ಮಾಡುತ್ತಲೇ ಕೊನೆಯುಸಿರೆಳೆದ ಶಿಕ್ಷಕ…!

1:14 PM, Thursday, June 21st, 2018
Share
1 Star2 Stars3 Stars4 Stars5 Stars
(No Ratings Yet)
Loading...

masterಬಾಗಲಕೋಟೆ: ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ಜಿಲ್ಲೆಯಲ್ಲಿ ದುರಂತವೊಂದು ನಡೆದಿದೆ. ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದಲ್ಲಿ ಯೋಗ ಮಾಡುತ್ತಿದ್ದ ವೇಳೆ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೃತ ಶಿಕ್ಷಕ ವಿಶ್ವನಾಥ್‌ ಬಿರಾದಾರ (50) ಎಂದು ತಿಳಿದು ಬಂದಿದ್ದು, ಯೋಗ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಮರಣ ಹೊಂದಿದ್ದಾರೆ.

ತೇರದಾಳ ಪಟ್ಟಣದ ಜೆವಿ ಮಂಡಳ ಸಂಸ್ಥೆಯ ಗುರುಕುಲ ಕ್ಯಾಂಪಸ್‌ನಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕ ಭಾಗವಹಿಸಿದ್ದರು. ಹೃದಯಾಘಾತಕ್ಕೆ ಒಳಗಾದ ಶಿಕ್ಷಕ ವಿಶ್ವನಾಥ್‌ ಎಸ್.ಜೆ. ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿಶ್ವನಾಥ್‌ ಅವರು ಮೊದಲಿಂದಲೂ ಯೋಗ ಅಭ್ಯಾಸ ಮಾಡುತ್ತಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English