[1]ನವದೆಹಲಿ: ಕಾಂಗ್ರೆಸ್ನ ಹಿರಿಯ ಮುಖಂಡ, ಲೋಕಸಭೆಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಮಹಾರಾಷ್ಟ್ರದ ಉಸ್ತುವಾರಿ ಆಗಿ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರದ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತ ಅಧಿಕೃತ ಪ್ರಕಟಣೆಯನ್ನು ಪಕ್ಷದ ಟ್ವಿಟ್ಟರ್ ಖಾತೆಯಲ್ಲಿ ಹಾಕಲಾಗಿದೆ.
ತಕ್ಷಣವೇ ಜಾರಿಗೆ ಬರುವಂತೆ ಖರ್ಗೆ ಮಹಾರಾಷ್ಟ್ರದ ಉಸ್ತುವಾರಿ ನೇಮಕಗೊಳಿಸಲಾಗಿದ್ದು, ಹಾಲಿ ಉಸ್ತುವಾರಿ ಮೋಹನ್ ಪ್ರಕಾಶ್ ಸೇವೆಯನ್ನು ಶ್ಲಾಘಿಸಲಾಗಿದೆ.