ನನ್ನನ್ನು ಯಾರು ಹೆದರಿಸಿ-ಬೆದರಿಸಿ ಗೆಲ್ಲಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

5:15 PM, Tuesday, June 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

shivkumarರಾಮನಗರ: ಕನಕಪುರ ಶಾಸಕ, ವೈದ್ಯಕೀಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ರಿಂದ ಅಭಿನಂದನಾ ಸಮಾವೇಶ ನಡೆಯುತ್ತಿದೆ.

ಕನಕಪುರ ಕ್ಷೇತ್ರದಲ್ಲಿ ನಡೆಯುತ್ತಿರುವ ಸಮಾವೇಶವನ್ನ ಉದ್ಘಾಟಿಸಿದ ಸಚಿವ ಅವರು ವೇದಿಕೆಗೆ ಬರುತ್ತಿದ್ದಂತೆ ಕೆಳಭಾಗದಲ್ಲಿ ಕುಳಿತಿದ್ದ ಕಾರ್ಯಕರ್ತರನ್ನ ಭೇಟಿ ಮಾಡಿ ಮಾತನಾಡಿಸಿದರು.

ಸಚಿವರಾದ ಬಳಿಕ ಕ್ಷೇತ್ರದಲ್ಲಿ ಮೊದಲ ಬಾರಿ ಬೃಹತ್ ಕಾರ್ಯಕರ್ತರ ಸಮಾವೇಶ ಇದಾಗಿದ್ದು, ಈ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದು ವಿಶೇಷವಾಗಿದೆ.

ಬಳಿಕ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ನನ್ನ ಮೇಲೆ ಐಟಿ ದಾಳಿ ಹಿನ್ನಲೆ ಜೈಲಿಗೆ ಹೋಗಲು ನಾನು ಸಿದ್ಧ. ತಪ್ಪು ಮಾಡಿದ್ರೆ ಮಾತ್ರ ಹೆದರಬೇಕು. ನಾನು ತಪ್ಪೇ ಮಾಡಿಲ್ಲ. ಏಕೆ ಹೆದರಬೇಕು. ಹೆದರಿಸಿ-ಬೆದರಿಸಿ ನಮ್ಮನ್ನ ಏನು ಮಾಡಲು ಸಾಧ್ಯವಿಲ್ಲ. ನನ್ನ ಮೇಲೆ ರಾಜಕೀಯ ಪ್ರೇರಿತ ದಾಳಿ ನಡೆಯುತ್ತಿದೆ. ಅದ್ಯಾವುದಕ್ಕು ನಾವು ಹೆದರಲ್ಲ ಸವಾಲು ಹಾಕಿದರು.

ಸಮಾವೇಶದಲ್ಲಿ ಸಂಸದ ಡಿ.ಕೆ.ಸುರೇಶ್, ವಿಧಾನಪರಿಷತ್ ಸದಸ್ಯ ಎಸ್.ರವಿ, ರಾಮನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಇಕ್ಬಾಲ್ ಹುಸೇನ್ ಸೇರಿದಂತೆ ಹಲವು ಕೈ ಮುಖಂಡರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English