[1]ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಯಲಯದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 11 ದಿನಗಳಲ್ಲಿ 3 ಕೆ.ಜಿ. ತೂಕ ಇಳಿಸಿಕೊಂಡಿದ್ದಾರೆ.
12 ದಿನಗಳ ಪ್ರಕೃತಿ ಚಿಕಿತ್ಸೆಗಾಗಿ ದಾಖಲಾಗಿರುವ ಸಿದ್ದರಾಮಯ್ಯ ಇಂದು ಕೊನೆಯ ದಿನದ ಚಿಕಿತ್ಸೆ ಪಡೆಯಲಿರುವ ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ಚಿಕಿತ್ಸಾಲಯದಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅಲ್ಲಿಂದ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.