- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸಿದ್ದರಾಮಯ್ಯ ಅವರು ಏನು ಹೇಳುತ್ತಾರೋ ಅದರಂತೆ ಮಾಡುತ್ತೇವೆ: ಸಚಿವ ರಮೇಶ್ ಜಾರಕಿಹೊಳಿ

ramesh [1]ಮಂಗಳೂರು: ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ತಂಡ ಧರ್ಮಸ್ಥಳಕ್ಕೆ ಆಗಮಿಸಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಸಚಿವರು ನಮ್ಮ ನಾಯಕರನ್ನು ಭೇಟಿ ಆಗಲು ಬಂದಿದ್ದೇನೆ. ಏನು ವಿಶೇಷಯಿಲ್ಲ.ಅವರ ಆರೋಗ್ಯ ವಿಚಾರಿಸಲು ಹೋಗುತ್ತಿದ್ದೇವೆ ಎಂದರು,ನಾನು ಮತ್ತು 8 ಜನ ಶಾಸಕರು ಬಂದಿದ್ದೇವೆ. ಬಜೆಟ್ ವಿಚಾರದಲ್ಲಿ ಇರುವ ಅಸಮಾಧಾನವನ್ನು ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ಅವರು ಮಾತನಾಡಿ ಕೊಳ್ಳುತ್ತಾರೆ.

ಸಿದ್ದರಾಮಯ್ಯ ಅವರು ಏನು ಹೇಳುತ್ತಾರೋ ಅದರಂತೆ ಮಾಡುತ್ತೇವೆ ಎಂದು ಸಚಿವ ಜಾರಕಿಹೊಳಿ ಹೇಳಿಕೆ ನೀಡಿದ್ದಿದಾರೆ.

ಅಥಣಿ ಶಾಸಕ ಮಹೇಶ್ ಕಮಟಳ್ಳಿ, ಕಾಗವಾಡದ ಶ್ರೀಮಂತ ಪಾಟೀಲ್, ಬಸವ ಕಲ್ಯಾಣದ ಬಿ.ನಾರಾಯಣ, ಬಳ್ಳಾರಿ ಶಾಸಕ ನಾಗೇಂದ್ರ, ರಾಯಚೂರು ಸಂಸದ ಬಿ.ವಿ.ನಾಯಕ್, ಎಂಎಲ್ಸಿ ವಿವೇಕ್ ರಾವ್ ಪಾಟೀಲ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಸ್ಕಿ ಶಾಸಕ ಪ್ರತಾಪ್‌ಗೌಡ ಪಾಟೀಲ್ ಆಗಮಿಸಿದರು.