ಮೂಲರಪಟ್ಣ ಸೇತುವೆ ಸ್ಥಳಕ್ಕೆ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ..!

1:18 PM, Saturday, June 30th, 2018
Share
1 Star2 Stars3 Stars4 Stars5 Stars
(No Ratings Yet)
Loading...

mullarpatnaಮಂಗಳೂರು: ಇತ್ತೀಚೆಗೆ ಮಂಗಳೂರಿನ ಕುಪ್ಪೆಪದವಿನಿಂದ ಬಂಟ್ವಾಳ ಸಂಪರ್ಕಿಸುವ ಮೂಲರಪಟ್ಣ ಸೇತುವೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಸಚಿವ ಯು.ಟಿ ಖಾದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸ್ಥಳೀಯರೊಂದಿಗೆ ಸಮಸ್ಯೆ ಆಲಿಸಿದ ಅವರು, ಶೀಘ್ರ ಪರ್ಯಾಯ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಮೂಲರಪಟ್ಣದಿಂದ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ನದಿಯ ಎರಡೂ ಕಡೆಯವರ ಸಂಪರ್ಕಕ್ಕಾಗಿ ಬೋಟ್ ವ್ಯವಸ್ಥೆ ಮಾಡಲು ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು ಎಂದರು.

ಮಳೆಗಾಲ ಕಳೆದ ಬಳಿಕ ಹೊಸ ಸೇತುವೆ ನಿರ್ಮಾಣ ಮಾಡುವ ಭರವಸೆಯನ್ನು ನೀಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English