- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾವೇರಿ ವಿಚಾರದಲ್ಲಿ ಎಲ್ಲರೂ ಚರ್ಚೆ ಮಾಡಿ ಒಮ್ಮತದ ತೀರ್ಮಾನಕ್ಕೆ ಬರುತ್ತೇವೆ: ಬಿ.ಎಸ್.ಯಡಿಯೂರಪ್ಪ

yedyurappa [1]ಬೆಂಗಳೂರು: ನಾಡಿನ ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮಾಡೋದಿಲ್ಲ. ಕಾವೇರಿ ವಿಚಾರದಲ್ಲಿ ಎಲ್ಲರೂ ಚರ್ಚೆ ಮಾಡಿ ಒಮ್ಮತದ ತೀರ್ಮಾನಕ್ಕೆ ಬರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆಗೆ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಸಂಬಂಧ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾತನಾಡಿದರು.

ನಾವು ರಾಜ್ಯ ಸರ್ಕಾರದ ಪರ ಇದ್ದೇವೆ. ಸರ್ಕಾರದ ತೀರ್ಮಾನಕ್ಕೆ ಬದ್ಧ. ಇಲ್ಲಿ ರಾಜಕೀಯ ಮಾಡುವ ಪ್ರಶ್ನೆಯೇ ಇಲ್ಲ. ರಾಜ್ಯದ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.