ಬಜೆಟ್​ನಲ್ಲಿ ಹಾಸನ, ಮಂಡ್ಯ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ…ಬಿಜೆಪಿ ಶಾಸಕರು ಮೇಜು ಕುಟ್ಟಿ ವ್ಯಂಗ್ಯ!

6:24 PM, Thursday, July 5th, 2018
Share
1 Star2 Stars3 Stars4 Stars5 Stars
(No Ratings Yet)
Loading...

BJP-MLAಬೆಂಗಳೂರು: ಆಯವ್ಯಯ ಭಾಷಣದ ಸಂದರ್ಭ ಲೋಕೋಪಯೋಗಿ ಇಲಾಖೆಯ ಯೋಜನೆಯನ್ನು ಸಿಎಂ ಓದುತ್ತಿದ್ದ ಹಾಗೇ ಬಿಜೆಪಿ ಶಾಸಕರು ಮೇಜು ಕುಟ್ಟಿ ವ್ಯಂಗ್ಯವಾಡಿದರು.

ಆಯವ್ಯಯದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಕೇವಲ ಹಾಸ್ಯಕ್ಕೆ ಸೀಮಿತಗೊಳಿಸಿರುವ ಬಗ್ಗೆ ಬಿಜೆಪಿ ಶಾಸಕರು ಮೇಜು ಕುಟ್ಟಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. ಲೋಕೋಪಯೋಗಿ ಇಲಾಖೆಯಲ್ಲಿ ಹಾಸನಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣಕ್ಕಾಗಿ 30 ಕೋಟಿ ರೂ. ಮೀಸಲಿರಿಸಲಾಗಿದೆ. ಉಳಿದಂತೆ ಇತರ ಯಾವುದೇ ಜಿಲ್ಲೆಗಳಲ್ಲಿನ ಲೋಕೋಪಯೋಗಿ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿಲ್ಲ. ಈ ಬಗ್ಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು.

ಇದೇ ರೀತಿ ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿನ ಯೋಜನೆಗಳ ಬಗ್ಗೆ ಸಿಎಂ ಕುಮಾರಸ್ವಾಮಿ ಘೋಷಿಸುತ್ತಾ ಇದ್ದ ಹಾಗೇ ಬಿಜೆಪಿ ಶಾಸಕರು ಮೇಜು ಕುಟ್ಟಿ ಕಿಚಾಯಿಸಿದ ಘಟನೆ ನಡೆಯಿತು. ಆ ಮೂಲಕ ಬಜೆಟ್ನಲ್ಲಿ ಹಾಸನ, ಮಂಡ್ಯ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದಾಗಿ ಪರೋಕ್ಷವಾಗಿ ಟೀಕಿಸಿದರು.

ಅದೇ ರೀತಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಏರಿಕೆ ಮಾಡಿರುವುದನ್ನು ಘೋಷಿಸುವಾಗಲೂ ಪ್ರತಿಪಕ್ಷ ಬಿಜೆಪಿ ಸದಸ್ಯರು ಮೇಜು ಕುಟ್ಟಿದರು. ಈ ವೇಳೆ ಸಿಎಂ ಕುಮಾರಸ್ವಾಮಿ ಬೇರೆ ರಾಜ್ಯಗಳಿಗೆ ತೂಲನೆ ಮಾಡಿದರೆ ನಮ್ಮಲ್ಲಿ ಕಡಿಮೆ ತೆರಿಗೆ ಇರುವುದನ್ನು ಗಮನಿಸಬೇಕು ಎಂದು ಒತ್ತಿ ಹೇಳಿದ್ದಾರೆ.

ಕರಾವಳಿ, ಉತ್ತರ ಕರ್ನಾಟಕಕ್ಕೆ ಯಾವುದೇ ಯೋಜನೆಗಳಿಲ್ಲ. ಇದು ಕೇವಲ ಎರಡು ಜಿಲ್ಲೆಗಳಿಗೆ ಸೀಮಿತವಾಗಿದೆ ಎಂದು ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು.

ಕರಾವಳಿಗೆ ದ್ರೋಹ ಬಗೆದ ಬಜೆಟ್ ಎಂಬ ಕರಪತ್ರವನ್ನು ಹಿಡಿದು ಸದನದಲ್ಲೇ ಬಿಜೆಪಿ ಕರಾವಳಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English